ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಆಮದು ಹೆಚ್ಚುತ್ತಿರುವುದರಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆಮದು ಕಾರಣದಿಂದ ಸ್ಥಳೀಯ ಅಡಿಕೆ ಬೆಳೆಗಾರರಿಗೆ ನ್ಯಾಯಯುತ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ ಹೇಳಿದ್ದಾರೆ.…..ಮುಂದೆ ಓದಿ….
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ‘ಅಡಿಕೆ ಕೃಷಿಯ ವೈಜ್ಞಾನಿಕ ವಿಧಾನಗಳು ಮತ್ತು ಕೀಟ ನಿರ್ವಹಣೆ’ ಕುರಿತು ತರಬೇತಿ ಮತ್ತು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಆಮದು ಸಮಸ್ಯೆಯನ್ನು ಪರಿಹರಿಸಲು ಮತ್ತು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಚೆಂಫಾಯಿ ಮತ್ತು ಜಮುವಾಂಗ್ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 7.43 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದು ಅವರು ಇದೇ ವೇಳೆ ಮುಖ್ಯಮಂತ್ರಿಗಳು ಘೋಷಿಸಿದರು. ಈ ಘಟಕಗಳು ಅಡಿಕೆಯ ಸರಿಯಾದ ಸಂಸ್ಕರಣೆಯನ್ನು, ಮೌಲ್ಯವರ್ಧಿತ ಉತ್ಪನ್ನಗಳಿಗೆ ಕಾರಣವಾಗಲಿದೆ ಹಾಗೂ ಮಾರುಕಟ್ಟೆ ವ್ಯವಸ್ಥೆಗೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…