Advertisement
MIRROR FOCUS

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

Share

ಭಾರತದಲ್ಲಿ 2026ರ ನೈಋತ್ಯ ಮುಂಗಾರು ಮಳೆಯ ಪ್ರಮಾಣವು ದೀರ್ಘಾವಧಿಯ ಸರಾಸರಿಯ ಕೇವಲ ಶೇಕಡಾ 90ರಷ್ಟಿರಬಹುದು ಎಂದು ಭಾರತೀಯ ಹವಾಮಾನ ಇಲಾಖೆಯು ತನ್ನ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ತಿಳಿಸಿದೆ. ಏಪ್ರಿಲ್‌ 13ರಂದು ನೀಡಿದ್ದ ಮೊದಲ ಅಂದಾಜಿನಲ್ಲಿ ಶೇಕಡಾ 92ರಷ್ಟು ಮಳೆಯಾಗಬಹುದು ಎಂದು ಹೇಳಲಾಗಿತ್ತು. ಇದೀಗ ಮಳೆಯ ಅಂದಾಜನ್ನು ಮತ್ತಷ್ಟು ಕಡಿಮೆ ಮಾಡಿ ಪರಿಷ್ಕರಿಸಲಾಗಿದೆ.

ಐಎಂಡಿ ಪ್ರಕಾರ, ಈಶಾನ್ಯ ಭಾರತದಲ್ಲಿ ಸಾಮಾನ್ಯ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದ್ದರೂ, ದೇಶದ ಉಳಿದ ಬಹುತೇಕ ಭಾಗಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯ ಸಾಧ್ಯತೆ ಇದೆ. ಉತ್ತರ ಪಶ್ಚಿಮ ಭಾರತ, ಮಧ್ಯ ಭಾರತ ಹಾಗೂ ದಕ್ಷಿಣ ಉಪಖಂಡದ ಹಲವೆಡೆ ಮಳೆಯ ಕೊರತೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಕೃಷಿಗೆ ಮಹತ್ವದ “ಮಾನ್ಸೂನ್ ಕೋರ್ ಝೋನ್” ಪ್ರದೇಶಗಳಲ್ಲೂ ಮಳೆಯ ಕೊರತೆ ಸಂಭವಿಸಬಹುದು ಎನ್ನುವ ಸೂಚನೆ ಕೃಷಿಕರಲ್ಲಿ ಆತಂಕ ಮೂಡಿಸಿದೆ. ದೇಶದ ಒಟ್ಟು ಕೃಷಿಭೂಮಿಯ ದೊಡ್ಡ ಭಾಗ ಇನ್ನೂ ಮಳೆಆಧಾರಿತವಾಗಿರುವ ಹಿನ್ನೆಲೆಯಲ್ಲಿ, ದುರ್ಬಲ ಮುಂಗಾರು ಅಕ್ಕಿ, ಕಾಳುಗಳು, ಎಣ್ಣೆಬೀಜ ಹಾಗೂ ಇತರೆ ಬೆಳೆಗಳ ಉತ್ಪಾದನೆ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನಶಾಸ್ತ್ರ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ, ಜೂನ್‌ನಿಂದ ದುರ್ಬಲ ಎಲ್‌ನಿನೊ (El Niño) ಪರಿಸ್ಥಿತಿ ರೂಪುಗೊಳ್ಳುವ ಸಾಧ್ಯತೆ ಇದ್ದು, ಮುಂಗಾರು ಹಂಗಾಮಿನ ದ್ವಿತೀಯಾರ್ಧದಲ್ಲಿ ಅದು ಮತ್ತಷ್ಟು ಬಲ ಪಡೆಯಬಹುದು. ಸಾಮಾನ್ಯವಾಗಿ ಎಲ್‌ನಿನೊ ಪರಿಣಾಮ ಭಾರತದ ಮುಂಗಾರು ಮಳೆಯ ಪ್ರಮಾಣವನ್ನು ಕುಗ್ಗಿಸುವುದಾಗಿ ಪರಿಗಣಿಸಲಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

2015ರಲ್ಲಿ ಎಲ್‌ನಿನೊ ಪರಿಣಾಮದಿಂದ ದೇಶದಲ್ಲಿ ದುರ್ಬಲ ಮುಂಗಾರು ದಾಖಲಾಗಿತ್ತು. ಈ ಬಾರಿ ಐಎಂಡಿಯ ಪರಿಷ್ಕೃತ ಮುನ್ಸೂಚನೆ ನಿಜವಾದರೆ, ಕಳೆದ 11 ವರ್ಷಗಳಲ್ಲೇ ಅತೀ ಕಡಿಮೆ ಮಳೆಯ ವರ್ಷವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕೃಷಿ ಉತ್ಪಾದನೆ ಕುಸಿತ, ಗ್ರಾಮೀಣ ಆರ್ಥಿಕತೆಯ ಮೇಲೆ ಒತ್ತಡ ಹಾಗೂ ಆಹಾರ ಧಾನ್ಯಗಳ ಬೆಲೆ ಏರಿಕೆಯ ಆತಂಕವೂ ಈ ಮುನ್ಸೂಚನೆಯೊಂದಿಗೆ ಎದುರಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಮುಂಗಾರು ಪ್ರವೇಶದ ಆರಂಭಿಕ ಹಂತ ಹಾಗೂ ಜೂನ್ ಮೊದಲಾರ್ಧದ ಮಳೆಯ ಸ್ಥಿತಿಗತಿಗಳು ಮುಂದಿನ ಹಂಗಾಮಿನ ದಿಕ್ಕು ನಿರ್ಧರಿಸಬಹುದು ಎನ್ನಲಾಗಿದೆ.

The India Meteorological Department (IMD) has revised India’s 2026 Southwest Monsoon forecast to 90% of the Long Period Average, lower than its earlier estimate of 92%. Most parts of the country are expected to receive below-normal rainfall due to developing El Niño conditions, raising concerns over agriculture, food prices, and the rural economy.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

8 hours ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

15 hours ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

15 hours ago

ಶ್ರೀಲಂಕಾದ ರಫ್ತು ಮಾರುಕಟ್ಟೆಯಲ್ಲಿ ಭಾರತದ ಬಲಿಷ್ಠ ಏರಿಕೆ..! – ತೆಂಗು ಆಧಾರಿತ ಉತ್ಪನ್ನಗಳ ರಫ್ತು 23.49 ಶೇಕಡಾ ಏರಿಕೆ

2026 ರ ಜನವರಿ–ಏಪ್ರಿಲ್ ಅವಧಿಯಲ್ಲಿ ಭಾರತವು ಶ್ರೀಲಂಕಾದ ಎರಡನೇ ಅತಿದೊಡ್ಡ ರಫ್ತು ಗಮ್ಯಸ್ಥಾನವಾಗಿ…

16 hours ago

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

23 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

23 hours ago