ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ಬಿಸಿಲಿನ ವಾತಾವರಣ ಹಾಗೂ ತೀವ್ರ ತಾಪಮಾನ ಇರುತ್ತದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಾದ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪೂರ್ವ ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ತಾಪಮಾನದ ವಾತಾವರಣ ಇರುತ್ತದೆ ಎಂದು ಆರೆಂಜ್ ಅಲರ್ಟ್ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ಬಿಹಾರ, ಗಂಗಾನದಿಯ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ಬಿಸಿ ಮತ್ತು ಒಣಹವೆ ವಾತಾವರಣ ಇರಲಿದೆ. ದೇಶದ ದಕ್ಷಿಣ ಭಾಗಗಳಲ್ಲಿ ಮಾನ್ಸೂನ್ ವೇಗ ಪಡೆಯುವ ಸಾಧ್ಯತೆಯಿದೆ ಎಂದು ಸಂಸ್ಥೆ ಹೇಳಿದೆ. ಈ ತಿಂಗಳ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು 13 ರಿಂದ 15 ರವರೆಗೆ ಕೊಂಕಣ ಮತ್ತು ಗೋವಾದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. 13 ರವರೆಗೆ ದಕ್ಷಿಣ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗುಡುಗು ಸಹಿತ, ಮಿಂಚು ಮತ್ತು ಬಿರುಗಾಳಿಯೊಂದಿಗೆ ಹಾಗೂ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ರಿಂದ 3 ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಜೂನ್12 ಹಾಗೂ 13 ರಂದು ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, ಕೆಲವು ಕಡೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…