ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ಬಿಸಿಲಿನ ವಾತಾವರಣ ಹಾಗೂ ತೀವ್ರ ತಾಪಮಾನ ಇರುತ್ತದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಾದ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪೂರ್ವ ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ತಾಪಮಾನದ ವಾತಾವರಣ ಇರುತ್ತದೆ ಎಂದು ಆರೆಂಜ್ ಅಲರ್ಟ್ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ಬಿಹಾರ, ಗಂಗಾನದಿಯ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತಮಿಳುನಾಡು ಬಿಸಿ ಮತ್ತು ಒಣಹವೆ ವಾತಾವರಣ ಇರಲಿದೆ. ದೇಶದ ದಕ್ಷಿಣ ಭಾಗಗಳಲ್ಲಿ ಮಾನ್ಸೂನ್ ವೇಗ ಪಡೆಯುವ ಸಾಧ್ಯತೆಯಿದೆ ಎಂದು ಸಂಸ್ಥೆ ಹೇಳಿದೆ. ಈ ತಿಂಗಳ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು 13 ರಿಂದ 15 ರವರೆಗೆ ಕೊಂಕಣ ಮತ್ತು ಗೋವಾದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. 13 ರವರೆಗೆ ದಕ್ಷಿಣ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗುಡುಗು ಸಹಿತ, ಮಿಂಚು ಮತ್ತು ಬಿರುಗಾಳಿಯೊಂದಿಗೆ ಹಾಗೂ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ರಿಂದ 3 ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಜೂನ್12 ಹಾಗೂ 13 ರಂದು ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, ಕೆಲವು ಕಡೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…