ಹಲವು ರಾಜ್ಯಗಳಲ್ಲಿ ಮುಂಗಾರು ಹಿಂದೆ ಸರಿದಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಮತ್ತೆ ಮಳೆಯಾಗುವ ಲಕ್ಷಣ ಕಾಣಿಸಿದೆ. ರಾಜ್ಯದಲ್ಲಿ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಅದು ಆಂಧ್ರಪ್ರದೇಶದ ಕರಾವಳಿ ಭಾಗದತ್ತ ಬೀಸುತ್ತಿದೆ. ಮತ್ತೊಂದು ಮೇಲ್ಮೈ ಸುಳಿಗಾಳಿ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 5ಕೀ.ಮೀ. ಎತ್ತರದಲ್ಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿಅ.10 ರಂದು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು ಒಂದು ದಿನ ‘ಎಲ್ಲೋ ಅಲರ್ಟ್, ಪಡೆದ ಜಿಲ್ಲೆಗಳಾಗಿವೆ. ಇದರ ಹೊರತು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಸಾಮಾನ್ಯವಾಗಿ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಇರಲಿದೆ.
ಮುಂಗಾರು ಹಿಂದೆ ಸರಿದ ಬಳಿಕ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ, ಹಲವು ಪ್ರದೇಶಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಹೀಗಾಗಿ ದೇಶದ ಹಲವು ಪ್ರದೇಶಗಳಲ್ಲಿ ಮುಂಗಾರು ಮಳೆಯ ಮುನ್ಸೂಚನೆಯಂತೆಯೇ ಇದೆ. ಗುರುವಾರದಂದು ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ ಸೇರಿದಂತೆ ಅನೇಕ ನೆರೆಯ ರಾಜ್ಯಗಳಲ್ಲಿ ಮಳೆಯಾಗಬಹುದು. ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆ ಪ್ರಕಾರ ಅ.9 ರವರೆಗೆ ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ನ್ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬಿಹಾರ ಮತ್ತು ಜಾರ್ಖಂಡ್ ನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಪಶ್ಚಿಮ ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…