Advertisement
ಸುದ್ದಿಗಳು

#WeatherReport | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ |

Share

ಹಲವು ರಾಜ್ಯಗಳಲ್ಲಿ ಮುಂಗಾರು ಹಿಂದೆ ಸರಿದಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತದ ಕಾರಣದಿಂದ ಮತ್ತೆ ಮಳೆಯಾಗುವ ಲಕ್ಷಣ ಕಾಣಿಸಿದೆ. ರಾಜ್ಯದಲ್ಲಿ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

Advertisement
Advertisement

ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಅದು ಆಂಧ್ರಪ್ರದೇಶದ ಕರಾವಳಿ ಭಾಗದತ್ತ ಬೀಸುತ್ತಿದೆ. ಮತ್ತೊಂದು ಮೇಲ್ಮೈ ಸುಳಿಗಾಳಿ ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 5ಕೀ.ಮೀ. ಎತ್ತರದಲ್ಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿಅ.10 ರಂದು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು ಒಂದು ದಿನ ‘ಎಲ್ಲೋ ಅಲರ್ಟ್, ಪಡೆದ ಜಿಲ್ಲೆಗಳಾಗಿವೆ. ಇದರ ಹೊರತು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಸಾಮಾನ್ಯವಾಗಿ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ಚಳಿಯ ವಾತಾವರಣವೂ ಇರಲಿದೆ.

Advertisement

ಮುಂಗಾರು ಹಿಂದೆ ಸರಿದ ಬಳಿಕ  ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ, ಹಲವು ಪ್ರದೇಶಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಹೀಗಾಗಿ ದೇಶದ ಹಲವು ಪ್ರದೇಶಗಳಲ್ಲಿ ಮುಂಗಾರು ಮಳೆಯ ಮುನ್ಸೂಚನೆಯಂತೆಯೇ ಇದೆ. ಗುರುವಾರದಂದು ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ ಸೇರಿದಂತೆ ಅನೇಕ ನೆರೆಯ ರಾಜ್ಯಗಳಲ್ಲಿ ಮಳೆಯಾಗಬಹುದು. ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಹವಾಮಾನ ಇಲಾಖೆ ಪ್ರಕಾರ ಅ.9  ರವರೆಗೆ ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ನ್ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬಿಹಾರ ಮತ್ತು ಜಾರ್ಖಂಡ್ ನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಪಶ್ಚಿಮ ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ : ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

22 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

15 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

15 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

20 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

21 hours ago