Advertisement
MIRROR FOCUS

ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?

Share

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ. ಈಗಲೂ ಹಲವು ತೋಟಗಳಲ್ಲಿ ಎಳೆ ಅಡಿಕೆ ಬೀಳುತ್ತಲಿದೆ. ಹೀಗಾಗಿ ಮುಂದಿನ ಫಸಲಿನ ಮೇಲೆ ಗಂಭೀರವಾದ ಪರಿಣಾಮ ಬೀರುವ ಸಾಧ್ಯತೆ ಇದೆ.

Advertisement
Advertisement

Advertisement

ಈ ಬಾರಿ ದಕ್ಷಿಣ ಕನ್ನಡ ಸೇರಿದಂತೆ ಕಾಸರಗೋಡು ಮತ್ತು ಆಸುಪಾಸಿನ ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರಿಗೆ ಹೊಡೆತ ಬೀಳುತ್ತಿದೆ. ಹವಾಮಾನ ವೈಪರೀತ್ಯ ಆರಂಭದಲ್ಲಿ ಸಂಕಷ್ಟ ತಂದಿತ್ತು. ನೀರಿನ ಕೊರತೆ ಕಾಡಿತ್ತು. ಅಡಿಕೆ ಬೆಳೆಯು ಹೆಚ್ಚು ನೀರನ್ನು ಬಯಸುವ ಬೆಳೆಯಾಗಿದೆ. ಈ ಬಾರಿ ಮಳೆಯ ಕೊರತೆ ಅದರ ಬೆನ್ನಿಗೇ ತಾಪಮಾನ ಏರಿಕೆಯ ಕಾರಣದಿಂದ ನೀರಿನ ಕೊರತೆಯೂ ಹಲವು ಕಡೆ ಕಾಡಿತ್ತು. ಕೊಳವೆಬಾವಿ ಕೊರೆದರೂ ಪಂಪ್‌ ಅಳವಡಿಕೆ ಇತ್ಯಾದಿ ವಿಳಂಬದ ಕಾರಣದಿಂದ ತೋಟಕ್ಕೆ ಬೇಕಾದಷ್ಟು ನೀರುಣಿಸಲು ಕಷ್ಟವಾಗಿತ್ತು. ಸರಿಯಾಗಿ ನೀರುಣಿಸಿದರೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಅಧಿಕವಾಗಿ ಎಳೆ ಅಡಿಕೆಯ ಮೇಲೆ ಪರಿಣಾಮ ಬೀರಿತ್ತು.

Advertisement

ಮೇ ಅಂತ್ಯದವರೆಗೂ ಸರಿಯಾಗಿ ಮಳೆಯಾಗಿಲ್ಲ, ಮೇ ಅಂತ್ಯದ ಬಳಿಕ ಮಳೆಯಾಗಿ ವಾತಾವರಣದ ಉಷ್ಣತೆ 30 ಡಿಗ್ರಿ ತಲಪುತ್ತಲೇ ಎಳೆ ಅಡಿಕೆ ಬೀಳಲು ಆರಂಭವಾಗಿತ್ತು. ನಂತರ ಸ್ವಲ್ಪ ದಿನಗಳ ಕಾಲ ಅಡಿಕೆ ಬೀಳುವುದು ಕಡಿಮೆಯಾದಂತೆಯೇ ಮಳೆಯ ಪ್ರಮಾಣ ಕಡಿಮೆಯಾಗಿ ವಾತಾವರನದ ಉಷ್ಣತೆ ಮತ್ತೆ ಏರಿಕೆಯಾಗಿ ಮತ್ತೆ ಮಳೆಯಾದಾಗ ತಂಪಾಗಿತ್ತು. ಹೀಗಾಗಿ ಮತ್ತೆ ಅಡಿಕೆ ಬೀಳುವುದಕ್ಕೆ ಆರಂಭವಾಗಿತ್ತು. ಹಲವು ಕಡೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಳೆ ಅಡಿಕೆ ಬೀಳುತ್ತಿದೆ. ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಇದು ಮುಂದಿನ ಬಾರಿಗೆ ಫಸಲಿನ ಕೊರತೆಗೂ ಕಾರಣವಾಗಬಹುದು.

Advertisement

ಈ ಪ್ರಮಾಣದಲ್ಲಿ ಇದುವರೆಗೂ ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯವೇ ಕಾರಣ ಎಂದು ವಿಶ್ಲೇಷಿಸಲಾಗಿದೆ.ಕೆಲವು ಕಡೆಗಳಲ್ಲಿ ಪೆಂತಿ ಕೀಟದ ಕಾರಣದಿಂದಲೂ ಅಡಿಕೆ ಬೀಳುತ್ತಿತ್ತು. ಇದು ಔಷಧಿ ಸಿಂಪಡಣೆಯ ಬಳಿಕ ನಿಯಂತ್ರಣಕ್ಕೆ ಬರುತ್ತಿತ್ತು. ಆದರೆ ಈ ಬಾರಿ ಔಷಧಿ ಸಿಂಪಡಣೆಯ ಬಳಿಕವೂ ಎಳೆ ಅಡಿಕೆ ಬೀಳುತ್ತಿರುವುದು ಹವಾಮಾನದ ಬದಲಾವಣೆಯೇ ಕಾರಣ ಎಂದು ಅಭಿಪ್ರಾಯ ಪಡಲಾಗಿದೆ.

Advertisement

There is a notable issue of excessive nut fall in Arecanut plantations in various areas of Dakshina Kannada district. Following the onset of rains, a significant number of nuts are falling from the trees. This ongoing trend in many plantations is causing concerns regarding its potential impact on the upcoming crop.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ| 2.06.2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಜು.4 ರಿಂದ ಉತ್ತಮ ಮಳೆ ಮುನ್ಸೂಚನೆ

30.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

21 hours ago

ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

ಒನಕೆ(Onake) ಎಂದಾಕ್ಷಣಾ ನೆನಪಾಗುವುದು ಚಿತ್ರದುರ್ಗದ ಉಕ್ಕಿನ ಕೋಟೆಯ(Chitradurga Fort) 'ಒನಕೆ ಓಬವ್ವ"(Onake Obavva).…

21 hours ago

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ

ಪ್ರಕೃತಿಗೆ(Nature) ಬಹಳ ತ್ರಾಸದಾಯಕವಾದದ್ದು ಈಗ ಪ್ಲಾಸ್ಟಿಕ್‌ ನ(Plastic) ಹಾವಳಿ. ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್‌…

22 hours ago

ಮೈಸೂರು ಅರಮನೆ ಸಮೀಪ ಪಾರಿವಾಳಗಳಿಗೆ ಆಹಾರ ಹಾಕದಿರಿ….! | ಬೀಳಲಿದೆ ದಂಡ : ತಜ್ಞರು, ಪಕ್ಷಿಪ್ರೇಮಿಗಳಅಭಿಪ್ರಾಯ ಏನು?

ಒಮ್ಮೊಮ್ಮೆ ನಾವು ಪ್ರಾಣಿ ಪಕ್ಷಿಗಳಿಗೆ(Animal-Birds) ತೋರಿಸುವ ಅತಿಯಾದ ಕಾಳಜಿ, ಪ್ರೀತಿ ಕೆಲವು ತೊಂದರೆಗಳಿಗೆ…

22 hours ago

ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ | ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ

ಇಂದು ಎಲ್ಲರ ಚಿತ್ತ ಚುಟುಕ ಮಾದರಿಯ ಕ್ರಿಕೆಟ್ ವಿಶ್ವಕಪ್ ಫೈನಲ್ (T20 World…

23 hours ago

ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ…! | ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

ಇತ್ತೀಚೆಗೆ ರಾಜ್ಯದಲ್ಲಿ ನಂದಿನಿ ಹಾಲಿನ(Nandini Milk) ಬೆಲೆ ಜಾಸ್ತಿಯಾಗಿದ್ದು(Price hike) ಗ್ರಾಹಕರನ್ನು(Customer) ಕಂಗೆಡಿಸಿದೆ.…

1 day ago