Advertisement
MIRROR FOCUS

ವಿಪರೀತ ಬೀಳುತ್ತಿರುವ ಎಳೆ ಅಡಿಕೆ | ಮುಂದಿನ ವರ್ಷದ ಅಡಿಕೆ ಇಳುವರಿ ಮೇಲೆ ಹೊಡೆತ.. | ತಾಪಮಾನ ಕಾರಣ..?

Share

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ. ಈಗಲೂ ಹಲವು ತೋಟಗಳಲ್ಲಿ ಎಳೆ ಅಡಿಕೆ ಬೀಳುತ್ತಲಿದೆ. ಹೀಗಾಗಿ ಮುಂದಿನ ಫಸಲಿನ ಮೇಲೆ ಗಂಭೀರವಾದ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಬಾರಿ ದಕ್ಷಿಣ ಕನ್ನಡ ಸೇರಿದಂತೆ ಕಾಸರಗೋಡು ಮತ್ತು ಆಸುಪಾಸಿನ ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರಿಗೆ ಹೊಡೆತ ಬೀಳುತ್ತಿದೆ. ಹವಾಮಾನ ವೈಪರೀತ್ಯ ಆರಂಭದಲ್ಲಿ ಸಂಕಷ್ಟ ತಂದಿತ್ತು. ನೀರಿನ ಕೊರತೆ ಕಾಡಿತ್ತು. ಅಡಿಕೆ ಬೆಳೆಯು ಹೆಚ್ಚು ನೀರನ್ನು ಬಯಸುವ ಬೆಳೆಯಾಗಿದೆ. ಈ ಬಾರಿ ಮಳೆಯ ಕೊರತೆ ಅದರ ಬೆನ್ನಿಗೇ ತಾಪಮಾನ ಏರಿಕೆಯ ಕಾರಣದಿಂದ ನೀರಿನ ಕೊರತೆಯೂ ಹಲವು ಕಡೆ ಕಾಡಿತ್ತು. ಕೊಳವೆಬಾವಿ ಕೊರೆದರೂ ಪಂಪ್‌ ಅಳವಡಿಕೆ ಇತ್ಯಾದಿ ವಿಳಂಬದ ಕಾರಣದಿಂದ ತೋಟಕ್ಕೆ ಬೇಕಾದಷ್ಟು ನೀರುಣಿಸಲು ಕಷ್ಟವಾಗಿತ್ತು. ಸರಿಯಾಗಿ ನೀರುಣಿಸಿದರೂ ವಾತಾವರಣದ ಉಷ್ಣತೆ 40 ಡಿಗ್ರಿಗಿಂತ ಅಧಿಕವಾಗಿ ಎಳೆ ಅಡಿಕೆಯ ಮೇಲೆ ಪರಿಣಾಮ ಬೀರಿತ್ತು.

ಮೇ ಅಂತ್ಯದವರೆಗೂ ಸರಿಯಾಗಿ ಮಳೆಯಾಗಿಲ್ಲ, ಮೇ ಅಂತ್ಯದ ಬಳಿಕ ಮಳೆಯಾಗಿ ವಾತಾವರಣದ ಉಷ್ಣತೆ 30 ಡಿಗ್ರಿ ತಲಪುತ್ತಲೇ ಎಳೆ ಅಡಿಕೆ ಬೀಳಲು ಆರಂಭವಾಗಿತ್ತು. ನಂತರ ಸ್ವಲ್ಪ ದಿನಗಳ ಕಾಲ ಅಡಿಕೆ ಬೀಳುವುದು ಕಡಿಮೆಯಾದಂತೆಯೇ ಮಳೆಯ ಪ್ರಮಾಣ ಕಡಿಮೆಯಾಗಿ ವಾತಾವರನದ ಉಷ್ಣತೆ ಮತ್ತೆ ಏರಿಕೆಯಾಗಿ ಮತ್ತೆ ಮಳೆಯಾದಾಗ ತಂಪಾಗಿತ್ತು. ಹೀಗಾಗಿ ಮತ್ತೆ ಅಡಿಕೆ ಬೀಳುವುದಕ್ಕೆ ಆರಂಭವಾಗಿತ್ತು. ಹಲವು ಕಡೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಳೆ ಅಡಿಕೆ ಬೀಳುತ್ತಿದೆ. ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಇದು ಮುಂದಿನ ಬಾರಿಗೆ ಫಸಲಿನ ಕೊರತೆಗೂ ಕಾರಣವಾಗಬಹುದು.

ಈ ಪ್ರಮಾಣದಲ್ಲಿ ಇದುವರೆಗೂ ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯವೇ ಕಾರಣ ಎಂದು ವಿಶ್ಲೇಷಿಸಲಾಗಿದೆ.ಕೆಲವು ಕಡೆಗಳಲ್ಲಿ ಪೆಂತಿ ಕೀಟದ ಕಾರಣದಿಂದಲೂ ಅಡಿಕೆ ಬೀಳುತ್ತಿತ್ತು. ಇದು ಔಷಧಿ ಸಿಂಪಡಣೆಯ ಬಳಿಕ ನಿಯಂತ್ರಣಕ್ಕೆ ಬರುತ್ತಿತ್ತು. ಆದರೆ ಈ ಬಾರಿ ಔಷಧಿ ಸಿಂಪಡಣೆಯ ಬಳಿಕವೂ ಎಳೆ ಅಡಿಕೆ ಬೀಳುತ್ತಿರುವುದು ಹವಾಮಾನದ ಬದಲಾವಣೆಯೇ ಕಾರಣ ಎಂದು ಅಭಿಪ್ರಾಯ ಪಡಲಾಗಿದೆ.

There is a notable issue of excessive nut fall in Arecanut plantations in various areas of Dakshina Kannada district. Following the onset of rains, a significant number of nuts are falling from the trees. This ongoing trend in many plantations is causing concerns regarding its potential impact on the upcoming crop.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 hour ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

10 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

16 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

16 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago