ಹವಾಮಾನ ಬದಲಾವಣೆಯಿಂದ ಕಾರ್ಮಿಕರ ಮೇಲೆ ಪರಿಣಾಮ – ಅಧ್ಯಯನ ವರದಿ

September 1, 2025
7:10 AM

ಕಳೆದ ಹಲವು ವರ್ಷಗಳಿಂದ ವಿಶ್ವದಾದ್ಯಂತ ಹವಾಮಾನ ಬದಲಾವಣೆಯು ಗಂಭೀರವಾದ ಸಮಸ್ಯೆಯನ್ನು ಉಂಟು ಮಾಡುತ್ತಿದೆ. ಈ ಹವಾಮಾನ ಬದಲಾವಣೆಯು ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಚೀನಾದ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.  ಕೃಷಿ, ಗ್ರಾಮೀಣ ಮಾತ್ರವಲ್ಲ ನಗರ ಪ್ರದೇಶದಲ್ಲೂ ಉದ್ಯಮಗಳ ಮೇಲೆ ಪರಿಣಾಮ ಬೀರಿದೆ.

Advertisement

ಕಾರ್ಮಿಕರ ಮೇಲೆ ಆಗುತ್ತಿರುವ ಪರಿಣಾಮ ಹಾಗೂ ಬದಲಾವಣೆಯ ಬಗ್ಗೆ ಚೀನಾ ಸಂಸ್ಥೆಯೊಂದು ಅಧ್ಯಯನ ನಡೆಸಿತ್ತು. ಕಾರ್ಮಿಕರ ಲಭ್ಯತೆ ಹಾಗೂ ಕಾರ್ಮಿಕರ ಸಮಸ್ಯೆಗಳ ಬಗ್ಗೆಯೂ ಗಮನಹರಿಸಲಾಗಿತ್ತು. ಈ ಸಂದರ್ಭ ಕಾರ್ಮಿಕರ ಲಭ್ಯತೆ ಹಾಗೂ ಉದ್ಯೋಗದ ಮೇಲೆ ಹವಾಮಾನ ಬದಲಾವಣೆಯ ಪ್ರಮುಖ ಪಾತ್ರ ಕಂಡುಬಂದಿದೆ. ತೀವ್ರವಾದ ಬಿಸಿಗಾಳಿ ಅಥವಾ ಭಾರೀ ಮಳೆಯ ಬಗ್ಗೆಯೂ ಚರ್ಚೆಯಾಗಿದೆ. 2014 ರಿಂದ 2020 ರವರೆಗಿನ ಚೀನಾದ ನಗರ ಮಟ್ಟದ ವಾರ್ಷಿಕ ಡೇಟಾವನ್ನು ಗಮನಿಸಲಾಗಿತ್ತು. ವಾತಾವರಣದ ಉಷ್ಣತೆ ಏರಿಕೆ ಕಂಡಾಗ ಸಂಸ್ಥೆಗಳ ಕಾರ್ಮಿಕರ ನೇಮಕಾತಿಯಲ್ಲಿ ಗಣನೀಯವಾಗಿ ಕಡಿಮೆ ಮಾಡಿಕೊಳ್ಳುತ್ತವೆ. ಭಾರೀ ಮಳೆಯ ಸಂದರ್ಭದಲ್ಲೂ ಕಾರ್ಮಿಕರ ನೇಮಕಾತಿ ಕಡಿಮೆಯಾಗಿತ್ತು. ಇದೆರಡೂ ಸಂದರ್ಭ ಕಂಪನಿಗಳ ವೆಚ್ಚದ ಮೇಲೆ ಪರಿಣಾಮ ಬೀರುತ್ತಿದ್ದವು. ಇದೇ ವೇಳೆ ಕೃಷಿ ಹಾಗೂ ಗ್ರಾಮೀಣ ಕ್ಷೇತ್ರದಲ್ಲೂ ಇಂತಹದ್ದೇ ಪರಿಣಾಮಗಳನ್ನು ಕಂಡಿದೆ. ಬಿಸಿ ವಾತಾವರಣದಲ್ಲಿ ಕೃಷಿ ಚಟುವಟಿಕೆಗಳೂ ಕಡಿಮೆಯಾಗುತ್ತವೆ, ಭಾರೀ ಮಳೆಯಾದಾಗಲೂ ಕಡಿಮೆಯಾಗುತ್ತಿರುವುದು ಕಂಡುಬಂದಿದೆ.

ಕಂಪನಿಗಳು ಇಂತಹ ಹವಾಮಾನ ಬದಲಾವಣೆಗಳ ವೇಳೆ ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು, ಸಂಸ್ಥೆಗಳು ಮಾನವ ಕಾರ್ಮಿಕರಿಗೆ ಬದಲಿಯಾಗಿ ಕೈಗಾರಿಕಾ ರೋಬೋಟ್‌ಗಳನ್ನು ಹೆಚ್ಚಾಗಿ ಅಳವಡಿಸಿಕೊಳ್ಳುತ್ತವೆ, ಇದರಿಂದಾಗಿ ಉತ್ಪಾದನಾ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತವೆ. ಇಂತಹ ಸಮಯದಲ್ಲಿ ಸಂಸ್ಥೆಗಳು ಹೆಚ್ಚು ಅನುಭವಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಒಲವು ತೋರುತ್ತವೆ ಮತ್ತು ಹೆಚ್ಚಿನ – ತಾಪಮಾನದ ಸಬ್ಸಿಡಿಗಳನ್ನು ನೀಡುವ ಸಾಧ್ಯತೆ ಹೆಚ್ಚು. ಇದರಿಂದಾಗಿ ಕಾರ್ಮಿಕರಲ್ಲಿ ಇಳಿಕೆ ಕಂಡುಬರುತ್ತದೆ , ಅಭದ್ರತೆ ಹೆಚ್ಚಾಗಿ ಕಂಡುಬರುತ್ತಿದೆ. ಆದರೆ, ಕೃಷಿ ಕ್ಷೇತ್ರದಲ್ಲಿ ಅಂತಹ ಬದಲಾವಣೆಗಳು ತಕ್ಷಣವೇ ಕಂಡುಬರಲಿಲ್ಲ, ಕೆಲಸಗಳಲ್ಲಿ ಇಳಿಕೆ ಕಂಡುಬರುತ್ತವೆ.

ಹವಾಮಾನ ವೈಪರೀತ್ಯ ಪ್ರತೀ ವರ್ಷ ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳ ಉಳಿವಿಗೆ ಕೆಲವೊಂದು ಪಾಲಿಸಿಗಳನ್ನು ಕಾರ್ಮಿಕರಿಗಾಗಿ ಸರ್ಕಾರಗಳ ಮಾಡಬೇಕಾಗಬಹುದು ಎನ್ನುವುದು ಅಧ್ಯಯನದ ಬಳಿಕ ಹೊರಬಂದಿರುವ ಅಂಶ. ಸರ್ಕಾರಿ ಮಟ್ಟದಲ್ಲಿ, ಸ್ಥಳೀಯವಾಗಿ  ಸೂಕ್ತವಾದ ಹಣಕಾಸಿನ ಸಬ್ಸಿಡಿಗಳನ್ನು ಒದಗಿಸಬೇಕು ಅಥವಾ ಉದ್ಯಮಗಳಿಗೆ, ಕೃಷಿ ಕಾರ್ಮಿಕರಿಗೆ ಮೀಸಲಾದ ಬೆಂಬಲ ನಿಧಿಗಳನ್ನು ಸ್ಥಾಪಿಸಬೇಕು. ಈ  ಮೂಲಕ ಕಾರ್ಮಿಕ ಮಾರುಕಟ್ಟೆಯ ಮೇಲೆ ಹವಾಮಾನ ಬದಲಾವಣೆಯ  ಪರಿಣಾಮಗಳನ್ನು ತಗ್ಗಿಸುವ ಪ್ರಯತ್ನ ನಡೆಯಬೇಕಾಗಬಹುದು ಎನ್ನುವುದು ಕಂಡುಬಂದಿರುವ ಅಂಶ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror