Advertisement
The Rural Mirror ವಾರದ ವಿಶೇಷ

ಹವಾಮಾನ ಬದಲಾವಣೆಯಿಂದ ಕಾರ್ಮಿಕರ ಮೇಲೆ ಪರಿಣಾಮ – ಅಧ್ಯಯನ ವರದಿ

Share

ಕಳೆದ ಹಲವು ವರ್ಷಗಳಿಂದ ವಿಶ್ವದಾದ್ಯಂತ ಹವಾಮಾನ ಬದಲಾವಣೆಯು ಗಂಭೀರವಾದ ಸಮಸ್ಯೆಯನ್ನು ಉಂಟು ಮಾಡುತ್ತಿದೆ. ಈ ಹವಾಮಾನ ಬದಲಾವಣೆಯು ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಚೀನಾದ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.  ಕೃಷಿ, ಗ್ರಾಮೀಣ ಮಾತ್ರವಲ್ಲ ನಗರ ಪ್ರದೇಶದಲ್ಲೂ ಉದ್ಯಮಗಳ ಮೇಲೆ ಪರಿಣಾಮ ಬೀರಿದೆ.

ಕಾರ್ಮಿಕರ ಮೇಲೆ ಆಗುತ್ತಿರುವ ಪರಿಣಾಮ ಹಾಗೂ ಬದಲಾವಣೆಯ ಬಗ್ಗೆ ಚೀನಾ ಸಂಸ್ಥೆಯೊಂದು ಅಧ್ಯಯನ ನಡೆಸಿತ್ತು. ಕಾರ್ಮಿಕರ ಲಭ್ಯತೆ ಹಾಗೂ ಕಾರ್ಮಿಕರ ಸಮಸ್ಯೆಗಳ ಬಗ್ಗೆಯೂ ಗಮನಹರಿಸಲಾಗಿತ್ತು. ಈ ಸಂದರ್ಭ ಕಾರ್ಮಿಕರ ಲಭ್ಯತೆ ಹಾಗೂ ಉದ್ಯೋಗದ ಮೇಲೆ ಹವಾಮಾನ ಬದಲಾವಣೆಯ ಪ್ರಮುಖ ಪಾತ್ರ ಕಂಡುಬಂದಿದೆ. ತೀವ್ರವಾದ ಬಿಸಿಗಾಳಿ ಅಥವಾ ಭಾರೀ ಮಳೆಯ ಬಗ್ಗೆಯೂ ಚರ್ಚೆಯಾಗಿದೆ. 2014 ರಿಂದ 2020 ರವರೆಗಿನ ಚೀನಾದ ನಗರ ಮಟ್ಟದ ವಾರ್ಷಿಕ ಡೇಟಾವನ್ನು ಗಮನಿಸಲಾಗಿತ್ತು. ವಾತಾವರಣದ ಉಷ್ಣತೆ ಏರಿಕೆ ಕಂಡಾಗ ಸಂಸ್ಥೆಗಳ ಕಾರ್ಮಿಕರ ನೇಮಕಾತಿಯಲ್ಲಿ ಗಣನೀಯವಾಗಿ ಕಡಿಮೆ ಮಾಡಿಕೊಳ್ಳುತ್ತವೆ. ಭಾರೀ ಮಳೆಯ ಸಂದರ್ಭದಲ್ಲೂ ಕಾರ್ಮಿಕರ ನೇಮಕಾತಿ ಕಡಿಮೆಯಾಗಿತ್ತು. ಇದೆರಡೂ ಸಂದರ್ಭ ಕಂಪನಿಗಳ ವೆಚ್ಚದ ಮೇಲೆ ಪರಿಣಾಮ ಬೀರುತ್ತಿದ್ದವು. ಇದೇ ವೇಳೆ ಕೃಷಿ ಹಾಗೂ ಗ್ರಾಮೀಣ ಕ್ಷೇತ್ರದಲ್ಲೂ ಇಂತಹದ್ದೇ ಪರಿಣಾಮಗಳನ್ನು ಕಂಡಿದೆ. ಬಿಸಿ ವಾತಾವರಣದಲ್ಲಿ ಕೃಷಿ ಚಟುವಟಿಕೆಗಳೂ ಕಡಿಮೆಯಾಗುತ್ತವೆ, ಭಾರೀ ಮಳೆಯಾದಾಗಲೂ ಕಡಿಮೆಯಾಗುತ್ತಿರುವುದು ಕಂಡುಬಂದಿದೆ.

ಕಂಪನಿಗಳು ಇಂತಹ ಹವಾಮಾನ ಬದಲಾವಣೆಗಳ ವೇಳೆ ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು, ಸಂಸ್ಥೆಗಳು ಮಾನವ ಕಾರ್ಮಿಕರಿಗೆ ಬದಲಿಯಾಗಿ ಕೈಗಾರಿಕಾ ರೋಬೋಟ್‌ಗಳನ್ನು ಹೆಚ್ಚಾಗಿ ಅಳವಡಿಸಿಕೊಳ್ಳುತ್ತವೆ, ಇದರಿಂದಾಗಿ ಉತ್ಪಾದನಾ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತವೆ. ಇಂತಹ ಸಮಯದಲ್ಲಿ ಸಂಸ್ಥೆಗಳು ಹೆಚ್ಚು ಅನುಭವಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಒಲವು ತೋರುತ್ತವೆ ಮತ್ತು ಹೆಚ್ಚಿನ – ತಾಪಮಾನದ ಸಬ್ಸಿಡಿಗಳನ್ನು ನೀಡುವ ಸಾಧ್ಯತೆ ಹೆಚ್ಚು. ಇದರಿಂದಾಗಿ ಕಾರ್ಮಿಕರಲ್ಲಿ ಇಳಿಕೆ ಕಂಡುಬರುತ್ತದೆ , ಅಭದ್ರತೆ ಹೆಚ್ಚಾಗಿ ಕಂಡುಬರುತ್ತಿದೆ. ಆದರೆ, ಕೃಷಿ ಕ್ಷೇತ್ರದಲ್ಲಿ ಅಂತಹ ಬದಲಾವಣೆಗಳು ತಕ್ಷಣವೇ ಕಂಡುಬರಲಿಲ್ಲ, ಕೆಲಸಗಳಲ್ಲಿ ಇಳಿಕೆ ಕಂಡುಬರುತ್ತವೆ.

ಹವಾಮಾನ ವೈಪರೀತ್ಯ ಪ್ರತೀ ವರ್ಷ ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳ ಉಳಿವಿಗೆ ಕೆಲವೊಂದು ಪಾಲಿಸಿಗಳನ್ನು ಕಾರ್ಮಿಕರಿಗಾಗಿ ಸರ್ಕಾರಗಳ ಮಾಡಬೇಕಾಗಬಹುದು ಎನ್ನುವುದು ಅಧ್ಯಯನದ ಬಳಿಕ ಹೊರಬಂದಿರುವ ಅಂಶ. ಸರ್ಕಾರಿ ಮಟ್ಟದಲ್ಲಿ, ಸ್ಥಳೀಯವಾಗಿ  ಸೂಕ್ತವಾದ ಹಣಕಾಸಿನ ಸಬ್ಸಿಡಿಗಳನ್ನು ಒದಗಿಸಬೇಕು ಅಥವಾ ಉದ್ಯಮಗಳಿಗೆ, ಕೃಷಿ ಕಾರ್ಮಿಕರಿಗೆ ಮೀಸಲಾದ ಬೆಂಬಲ ನಿಧಿಗಳನ್ನು ಸ್ಥಾಪಿಸಬೇಕು. ಈ  ಮೂಲಕ ಕಾರ್ಮಿಕ ಮಾರುಕಟ್ಟೆಯ ಮೇಲೆ ಹವಾಮಾನ ಬದಲಾವಣೆಯ  ಪರಿಣಾಮಗಳನ್ನು ತಗ್ಗಿಸುವ ಪ್ರಯತ್ನ ನಡೆಯಬೇಕಾಗಬಹುದು ಎನ್ನುವುದು ಕಂಡುಬಂದಿರುವ ಅಂಶ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago