Advertisement
The Rural Mirror ಕಾಳಜಿ

ಷೇರು ಮಾರುಕಟ್ಟೆಯ ಅಸ್ಥಿರತೆ | ಅಡಿಕೆಯ ಮೇಲೆ ಪರಿಣಾಮವಾಗದಂತೆ ಇರಲಿ ಎಚ್ಚರ |

Share

ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ಮಹಾಕುಸಿತವನ್ನು ಕಂಡಿದ್ದು, ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕವು  ಏರಿಕೆ ಕಂಡಿದೆ. ಅಸ್ಥಿರತೆ ಮುಂದುವರಿದಿದೆ. ಆದರೆ ಆಶಾದಾಯಕ ವಾತಾವರಣ ಇದೆ. ಈ ನಡುವೆಯೂ ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ ನೇರವಾಗಿ ಯಾವುದೇ ಸಂಬಂಧಗಳು ಇಲ್ಲ. ಹಾಗಿದ್ದರೂ ಈ ಹಿಂದೆ ಷೇರು ಮಾರುಕಟ್ಟೆಯ ಅಸ್ಥಿರವಾದ ಪರಿಸ್ಥಿತಿಗಳು ಅಡಿಕೆಯ ಮೇಲೆ ಪರಿಣಾಮ ಬಿದ್ದಿದೆ. ಇದಕ್ಕಾಗಿ ಈಗ ಅಡಿಕೆ ಬೆಳೆಗಾರರು ಎಚ್ಚರ ವಹಿಸಬೇಕಿದೆ. ಮಾರುಕಟ್ಟೆ ಏರಿಕೆ, ನಷ್ಟವನ್ನು ತಪ್ಪಿಸಲು ವಿಪರೀತ ನಿರೀಕ್ಷೆಯ ಧಾರಣೆಯ ಬಗ್ಗೆಯೂ ಯೋಚಿಸಿ ನಿರ್ಧರಿಸಬೇಕಿದೆ.……..ಮುಂದೆ ಓದಿ…..

ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತವನ್ನು ಕಂಡಿದ್ದು, ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇಕಡಾ 3.5 ಪರ್ಸೆಂಟ್‌ಕ್ಕಿಂತ ಹೆಚ್ಚು ಇಳಿಕೆಗೊಂಡಿತ್ತು. ಡೊನಾಲ್ಡ್ ಟ್ರಂಪ್‌ ಪ್ರತಿ ಸುಂಕವನ್ನು ಘೋಷಣೆ ಮಾಡಿದ ಬಳಿಕ ಕುಸಿತಗೊಂಡ ಷೇರುಪೇಟೆ ಪತನಕ್ಕೆ ಕಾರಣವಾಯಿತು. ಮುಂದೆ ಮತ್ತಷ್ಟು ಇಳಿಕೆಯಾಯಿತು. ಷೇರು ಮಾರುಕಟ್ಟೆಯಲ್ಲಿನ ಈ ಭೀಕರ ಕುಸಿತಕ್ಕೆ ಹಲವು ಕಾರಣಗಳಿವೆ. ಟ್ರಂಪ್ ಆಡಳಿತವು 180 ಕ್ಕೂ ಹೆಚ್ಚು ದೇಶಗಳ ಮೇಲೆ ವ್ಯಾಪಕ ಸುಂಕಗಳನ್ನು ವಿಧಿಸಿದೆ. ಇದು ಮಾರುಕಟ್ಟೆ ನಡುಕವನ್ನು ಸೃಷ್ಟಿಸಿತ್ತು.

ಡೊನಾಲ್ಡ್ ಟ್ರಂಪ್ ಅವರ ಆಡಳಿತವು ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಬದಲಾಯಿಸಲಿಲ್ಲ, ಅದದರ ಬದಲಾಗಿ “ಸುಂಕಗಳು ಒಂದು ರೀತಿಯ ಔಷಧಿ ಇದ್ದಂತೆ. ಜಾಗತಿಕ ಷೇರು ಮಾರುಕಟ್ಟೆಗಳಲ್ಲಿನ ನಷ್ಟದ ಬಗ್ಗೆ ನನಗೆ ಚಿಂತೆಯಿಲ್ಲ.ಆದರೆ ಕೆಲವೊಮ್ಮೆ ಏನನ್ನಾದರೂ ಸರಿಪಡಿಸಲು ನೀವು ಔಷಧಿಯನ್ನು ತೆಗೆದುಕೊಳ್ಳಬೇಕು” ಎಂದು ಡೊನಾಲ್ಡ್ ಟ್ರಂಪ್‌ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ನಡುವೆ ಮಂಗಳವಾರ ಷೇರು ಮಾರುಕಟ್ಟೆ ಚೇತರಿಸಿಕೊಂಡಿವೆ.ಮಾರುಕಟ್ಟೆ ಸೂಚ್ಯಂಕಗಳು ಮೇಲೆದ್ದಿದೆ. ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕವು ಭರ್ಜರಿ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಗಳ ಧನಾತ್ಮಕ ಸೂಚನೆಗಳು ಮಾರುಕಟ್ಟೆಯ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ಭಾರತದ ಸ್ಥಿರವಾದ ಆರ್ಥಿಕ ಮೂಲಭೂತ ಅಂಶಗಳನ್ನು ಮಾರುಕಟ್ಟೆಯ ಬೆಂಬಲಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಪರಿಸ್ಥಿತಿ ಸುಧಾರಣೆಯಾಗಬಹುದು ಎನ್ನುವ ನಿರೀಕ್ಷೆ ಇದೆ.

ಆದರೆ ಅಡಿಕೆ ಬೆಳೆಗಾರರು ಷೇರುಮಾರುಕಟ್ಟೆಯ ಅಸ್ಥಿರತೆಯ ಬಗ್ಗೆಯೂ ಗಮನಿಸಬೇಕಾಗಿದೆ. ಈ ಹಿಂದೆ ಷೇರುಮಾರುಕಟ್ಟೆಯ ಅಸ್ಥಿರತೆಯು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಅಂತರರಾಷ್ಟ್ರೀಯ ಆರ್ಥಿಕ ಬೆಳವಣಿಗೆಗಳು ಮತ್ತು ವಿನಿಮಯ ದರದ ಏರಿಳಿತಗಳು ಅಡಿಕೆ ಮಾರುಕಟ್ಟೆಯ ಮೇಲೆ ಪರೋಕ್ಷ ಪರಿಣಾಮ ಬೀರಿದೆ. ಷೇರು ಮಾರುಕಟ್ಟೆಯ ಅಸ್ಥಿರವಾದಂತೆಯೇ ಅಡಿಕೆ ಧಾರಣೆ ಏರಿಕೆ ಹಾಗೂ ಮಾರುಕಟ್ಟೆ ಇನ್ನಷ್ಟು ಏರಿಕೆಯ ಸುದ್ದಿಗಳು ಬಂದವು. ಆದರೆ ಆ ಸಮಯದ ನಂತರ ಮಾರುಕಟ್ಟೆ ಇಳಿಕೆಯಾದ ಉದಾಹರಣೆ ಇದೆ. ಹೀಗಾಗಿ ವಿಪರೀತವಾದ ಧಾರಣೆ ಏರಿಕೆಯ ನಿರೀಕ್ಷೆಗೆ ಅಡಿಕೆ ಬೆಳೆಗಾರರು ಒಳಗಾಗದೆ , ಅಗತ್ಯದಂತೆ ಅಡಿಕೆ ಮಾರಾಟ ಮಾಡಿ ಮಾರುಕಟ್ಟೆಯನ್ನು ಸ್ಥಿರವಾಗುವಂತೆ ಮಾಡಬಹುದಾಗಿದೆ.

ಅಡಿಕೆ ಮಾರುಕಟ್ಟೆಯು ಹವಾಮಾನ , ಮಣ್ಣಿನ ಸ್ಥಿತಿ, ಪೂರೈಕೆ ಮತ್ತು ಬೇಡಿಕೆ, ಸರ್ಕಾರದ ನೀತಿ, ವಿಶ್ವ ಆರ್ಥಿಕತೆ ಸ್ಥಿತಿ, ನಕಲಿ ಉತ್ಪನ್ನಗಳು ಅಥವಾ ಕಳಪೆ ಉತ್ಪನ್ನಗಳ ಅಂಶಗಳ ಮೇಲೆ ಮಾರುಕಟ್ಟೆ ನಿಂತಿದೆ. ಅದರ ಜೊತೆಗೆ ಈಗ ಪ್ರಮುಖವಾಗಿ ಊಹಾಪೋಹಗಳು ಅಡಿಕೆ ಮಾರುಕಟ್ಟೆಯನ್ನು ಹಿಡಿದು ನಿಲ್ಲಿಸುತ್ತವೆ. ಎಲ್ಲೇ ಏನೇ ಆದರೂ ಪರಿಣಾಮ ಅಡಿಕೆ ಬೆಳೆಗಾರರ ಮೇಲೆ.ಇದಕ್ಕಾಗಿ ಈಗ ಷೇರು ಮಾರುಕಟ್ಟೆಯ ಅಸ್ಥಿರದ ವೇಳೆಯೂ ಅಡಿಕೆ ಬೆಳೆಗಾರರು ಗಮನಿಸುವುದು ಉತ್ತಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

14 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

14 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

19 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

19 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

19 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago