ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ ಏಕಕಾಲದಲ್ಲಿ ಮಾವು ಸಾಗಣೆ ಮಾಡುತ್ತಿದ್ದು, ಪೂರೈಕೆ ಪ್ರಮಾಣ ಹೆಚ್ಚಾಗಿ ಬೆಲೆಯೂ ಕುಸಿತಗೊಂಡಿದೆ.
ಅಕಾಲಿಕ ಮಳೆ, ಬಿರುಗಾಳಿಯಿಂದ ಮಾವು ಇಳುವರಿ ಕುಸಿತವಾಗಿದ್ದು, ಈ ಹಿನ್ನಲೆಯಲ್ಲಿ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು.ಮಾವು ಬೆಳೆಗಾರ ಹೊನ್ನಪ್ಪ, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ ಎಂದು ಮಾವು ಬೆಳೆಗಾರ ಗೋಪಾಲ್ ಹೇಳುತ್ತಾರೆ.
ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ.ಈ ಬಾರಿ ಉತ್ತಮ ಆದಾಯ ಬರುವ ನಿರೀಕ್ಷೆ ಇತ್ತು. ಆಲಿಕಲ್ಲು ಮತ್ತು ಮಳೆಯಿಂದಾಗಿ ಬೆಲೆ ಮತ್ತು ಇಳುವರಿ ಎರಡೂ ಕುಸಿತವಾಗಿದೆ ಎಂದು ಮಾವು ಬೆಳೆಗಾರ ಹೊನ್ನಪ್ಪ ಹೇಳುತ್ತಾರೆ,
ರಾಮನಗರ ಜಿಲ್ಲೆಯ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಮಾವು ಬೆಳೆಯಲಾಗಿದೆ. ಆದರೆ ಪ್ರಕೃತಿಯ ವಿಕೋಪದಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ NDRF, SDRF ನಿಯಮದ ಅನ್ವಯ ಪರಿಹಾರ ನೀಡಲು ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಮನಗರ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಎಂ.ಎಸ್. ರಾಜು ಹೇಳಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…