ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ ಏಕಕಾಲದಲ್ಲಿ ಮಾವು ಸಾಗಣೆ ಮಾಡುತ್ತಿದ್ದು, ಪೂರೈಕೆ ಪ್ರಮಾಣ ಹೆಚ್ಚಾಗಿ ಬೆಲೆಯೂ ಕುಸಿತಗೊಂಡಿದೆ.
ಅಕಾಲಿಕ ಮಳೆ, ಬಿರುಗಾಳಿಯಿಂದ ಮಾವು ಇಳುವರಿ ಕುಸಿತವಾಗಿದ್ದು, ಈ ಹಿನ್ನಲೆಯಲ್ಲಿ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು.ಮಾವು ಬೆಳೆಗಾರ ಹೊನ್ನಪ್ಪ, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ ಎಂದು ಮಾವು ಬೆಳೆಗಾರ ಗೋಪಾಲ್ ಹೇಳುತ್ತಾರೆ.
ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ.ಈ ಬಾರಿ ಉತ್ತಮ ಆದಾಯ ಬರುವ ನಿರೀಕ್ಷೆ ಇತ್ತು. ಆಲಿಕಲ್ಲು ಮತ್ತು ಮಳೆಯಿಂದಾಗಿ ಬೆಲೆ ಮತ್ತು ಇಳುವರಿ ಎರಡೂ ಕುಸಿತವಾಗಿದೆ ಎಂದು ಮಾವು ಬೆಳೆಗಾರ ಹೊನ್ನಪ್ಪ ಹೇಳುತ್ತಾರೆ,
ರಾಮನಗರ ಜಿಲ್ಲೆಯ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಮಾವು ಬೆಳೆಯಲಾಗಿದೆ. ಆದರೆ ಪ್ರಕೃತಿಯ ವಿಕೋಪದಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ NDRF, SDRF ನಿಯಮದ ಅನ್ವಯ ಪರಿಹಾರ ನೀಡಲು ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಮನಗರ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಎಂ.ಎಸ್. ರಾಜು ಹೇಳಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…