Advertisement
MIRROR FOCUS

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

Share

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ ಏಕಕಾಲದಲ್ಲಿ ಮಾವು ಸಾಗಣೆ ಮಾಡುತ್ತಿದ್ದು, ಪೂರೈಕೆ  ಪ್ರಮಾಣ ಹೆಚ್ಚಾಗಿ ಬೆಲೆಯೂ ಕುಸಿತಗೊಂಡಿದೆ.

ಅಕಾಲಿಕ ಮಳೆ, ಬಿರುಗಾಳಿಯಿಂದ ಮಾವು  ಇಳುವರಿ ಕುಸಿತವಾಗಿದ್ದು,  ಈ ಹಿನ್ನಲೆಯಲ್ಲಿ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು.ಮಾವು ಬೆಳೆಗಾರ ಹೊನ್ನಪ್ಪ, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು.  ಆದರೆ  ಬೆಲೆ  ಕುಸಿತಗೊಂಡಿದೆ.  ಎಲ್ಲ  ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ ಎಂದು ಮಾವು ಬೆಳೆಗಾರ ಗೋಪಾಲ್ ಹೇಳುತ್ತಾರೆ.

ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು.  ಆದರೆ  ಬೆಲೆ  ಕುಸಿತಗೊಂಡಿದೆ. ಎಲ್ಲ  ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ.ಈ ಬಾರಿ  ಉತ್ತಮ ಆದಾಯ ಬರುವ ನಿರೀಕ್ಷೆ ಇತ್ತು. ಆಲಿಕಲ್ಲು ಮತ್ತು ಮಳೆಯಿಂದಾಗಿ ಬೆಲೆ ಮತ್ತು ಇಳುವರಿ ಎರಡೂ ಕುಸಿತವಾಗಿದೆ ಎಂದು ಮಾವು ಬೆಳೆಗಾರ ಹೊನ್ನಪ್ಪ ಹೇಳುತ್ತಾರೆ,

ರಾಮನಗರ ಜಿಲ್ಲೆಯ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಮಾವು ಬೆಳೆಯಲಾಗಿದೆ. ಆದರೆ ಪ್ರಕೃತಿಯ ವಿಕೋಪದಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ NDRF, SDRF ನಿಯಮದ ಅನ್ವಯ ಪರಿಹಾರ ನೀಡಲು ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ  ವರದಿ ಸಲ್ಲಿಸಲಾಗುವುದು ಎಂದು ರಾಮನಗರ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಎಂ.ಎಸ್. ರಾಜು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

14 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

16 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

2 days ago