ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

February 6, 2025
7:33 AM
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ

ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುವ ಹಿನ್ನೆಲೆಯಲ್ಲಿ ಅವುಗಳ ಚಲನ ವಲನಗಳನ್ನು ಗಮನ ಹರಿಸಲು ಆನೆಗಳ ಹಿಂಡಿನ ನೇತೃತ್ವವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ  ಕೆ.ಪಿ. ಟ್ರ್ಯಾಕರ್ ಎಂಬ ರೇಡಿಯೋ ಕಾಲರ್‌ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಸಚಿವರು ಹಸ್ತಾಂತರಿಸಿದರು.  6 ಸಾವಿರದ 395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚಿನ ಆನೆಗಳ ಸಂಖ್ಯೆಯನ್ನು ಹೊಂದಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror