ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುವ ಹಿನ್ನೆಲೆಯಲ್ಲಿ ಅವುಗಳ ಚಲನ ವಲನಗಳನ್ನು ಗಮನ ಹರಿಸಲು ಆನೆಗಳ ಹಿಂಡಿನ ನೇತೃತ್ವವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿ ಕೆ.ಪಿ. ಟ್ರ್ಯಾಕರ್ ಎಂಬ ರೇಡಿಯೋ ಕಾಲರ್ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಸಚಿವರು ಹಸ್ತಾಂತರಿಸಿದರು. 6 ಸಾವಿರದ 395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚಿನ ಆನೆಗಳ ಸಂಖ್ಯೆಯನ್ನು ಹೊಂದಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…