Advertisement
MIRROR FOCUS

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

Share

ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುವ ಹಿನ್ನೆಲೆಯಲ್ಲಿ ಅವುಗಳ ಚಲನ ವಲನಗಳನ್ನು ಗಮನ ಹರಿಸಲು ಆನೆಗಳ ಹಿಂಡಿನ ನೇತೃತ್ವವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ  ಕೆ.ಪಿ. ಟ್ರ್ಯಾಕರ್ ಎಂಬ ರೇಡಿಯೋ ಕಾಲರ್‌ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಸಚಿವರು ಹಸ್ತಾಂತರಿಸಿದರು.  6 ಸಾವಿರದ 395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚಿನ ಆನೆಗಳ ಸಂಖ್ಯೆಯನ್ನು ಹೊಂದಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

3 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

15 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago