ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುವ ಹಿನ್ನೆಲೆಯಲ್ಲಿ ಅವುಗಳ ಚಲನ ವಲನಗಳನ್ನು ಗಮನ ಹರಿಸಲು ಆನೆಗಳ ಹಿಂಡಿನ ನೇತೃತ್ವವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿ ಕೆ.ಪಿ. ಟ್ರ್ಯಾಕರ್ ಎಂಬ ರೇಡಿಯೋ ಕಾಲರ್ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಸಚಿವರು ಹಸ್ತಾಂತರಿಸಿದರು. 6 ಸಾವಿರದ 395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚಿನ ಆನೆಗಳ ಸಂಖ್ಯೆಯನ್ನು ಹೊಂದಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…