#Agriculture | ಅಂತರಾಷ್ಟ್ರೀಯ ಮಟ್ಟದಲ್ಲೂ ಆರಂಭವಾಗಿದೆ ಆಹಾರ ಭದ್ರತೆಯ ಬಿಸಿ | ಆಹಾರ ಉತ್ಪಾದನೆಯನ್ನು ಹೆಚ್ಚಿಸಲು ಗಮನಹರಿಸಿದ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್ |

September 11, 2022
9:16 PM

ಪ್ರಪಂಚದಲ್ಲಿ ಆಹಾರ ಭದ್ರತೆಯ ಬಗ್ಗೆ ಹೆಚ್ಚಿನ ಗಮನಹರಿಸುವ ಕೆಲಸ ಆರಂಭವಾಗಿದೆ. ಕೃಷಿ(Agriculture) ಕ್ಷೇತ್ರದ ಬೆಳವಣಿಗೆ, ಕೃಷಿ ಜಿಡಿಪಿ ಹೆಚ್ಚಳದ ಕಡೆಗೆ ಎಲ್ಲಾ ಒಕ್ಕೂಟಗಳೂ ಕೆಲಸ ಆರಂಭ ಮಾಡಿದೆ. ಇದೀಗ  ಆಫ್ರಿಕಾದ ಕೃಷಿ ವಲಯದ ನೀತಿ ನಿರೂಪಕರು ಆಫ್ರಿಕಾ ಖಂಡದಲ್ಲಿ ಆಹಾರ ಉತ್ಪಾದನೆಯನ್ನು ಹೆಚ್ಚಿಸಲು, ಪ್ರಾಯೋಗಿಕ ಕ್ರಮಗಳನ್ನು ಜಾರಿಗೆ ತರಲು ನಿರ್ಣಾಯಕವಾಗಿ ಕಾರ್ಯನಿರ್ವಹಿಸಲುನಿರ್ಧರಿಸಿದ್ದಾರೆ.

ಆಫ್ರಿಕಾದ ರುವಾಂಡಾದ ರಾಜಧಾನಿ ಕಿಗಾಲಿಯಲ್ಲಿ ನಡೆದ ಐದು ದಿನಗಳ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್  ಶೃಂಗಸಭೆಯ ಸಮಾರೋಪದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಆಹಾರ ಭದ್ರತೆಯನ್ನು ನಿರ್ಮಿಸಲು ಮತ್ತು ಆಹಾರ ವ್ಯವಸ್ಥೆಗಳನ್ನು ಪರಿವರ್ತಿಸಲು ಮತ್ತು ಆಫ್ರಿಕಾದಲ್ಲಿ ಸುಸ್ಥಿರ, ಲಾಭದಾಯಕ ಮತ್ತು ಕೃಷಿ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಯತ್ನಗಳನ್ನು ಬೆಂಬಲಿಸಲು ಮತ್ತು ಚಾಲನೆ ಮಾಡಲು ಅಗತ್ಯ ಕ್ರಮಗಳ ಕಡೆಗೆ ಹೆಜ್ಜೆ ಇರಿಸಿದ್ದಾರೆ. ಕೃಷಿಗೆ ಹೆಚ್ಚಿನ ಸಂಪನ್ಮೂಲಗಳನ್ನು ನಿರ್ದೇಶಿಸುವ ತಮ್ಮ ಸಂಕಲ್ಪವನ್ನು ಅಲ್ಲಿನ ಕಾಯಕರು ಪ್ರಕಟಿಸಿದ್ದಾರೆ.

ಶೃಂಗಸಭೆಯಲ್ಲಿ  ರುವಾಂಡಾದ ಕೃಷಿ ಸಚಿವ ಜೆರಾಲ್ಡಿನ್ ಮುಕೇಶಿಮಾನಾ ಅವರು ಮಾತನಾಡುತ್ತಾ, ಆಹಾರ ಭದ್ರತೆಯ ವಿಷಯದಲ್ಲಿ ಇನ್ನು ಮುಂದೆ ನಾವು ಮಾತನಾಡುವುದಿಲ್ಲ, ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದರು. ಅಲ್ಲದೆ, ಕಡಿಮೆ ಪದಗಳನ್ನು ಬಳಸುತ್ತೇವೆ ಮತ್ತು ಹೆಚ್ಚಿನ ಕ್ರಿಯೆಗಳನ್ನು ಮಾಡುತ್ತೇವೆ ಎನ್ನುವುದನ್ನು ಹೇಳಿದ್ದರು.

ಶೃಂಗ ಸಭೆಯಲ್ಲಿ ಕೃಷಿ ಅಭಿವೃದ್ಧಿಗೆ ಪ್ರಮುಖವಾಗಿ ರೈತರು ಕೈಗೆಟುಕುವ, ಉತ್ಪಾದಕ, ಹವಾಮಾನ/ಕೀಟ-ನಿರೋಧಕ ಬೀಜಗಳ ತಯಾರಿ ಅಗತ್ಯವಿದೆ ಎನ್ನುವುದನ್ನು ಚರ್ಚಿಸಲಾಯಿತು. ಅದರ ಜೊತೆಗೆ ಮಹಿಳಾ ನೇತೃತ್ವದ ಎಸ್‌ಎಂಇಗಳಿಗೆ 25 ಪ್ರತಿಶತದಷ್ಟು ಹಣವನ್ನು ನೀಡಬೇಕು. ಇದು ಮಹಿಳೆಯರು ಮತ್ತು ಯುವಕರಿಗೆ ಕೃಷಿಯಲ್ಲಿ ಅಭಿವೃದ್ಧಿ ಹೊಂದಲು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎನ್ನುವುದು ಕೂಡಾ ಗಂಭೀರ ಚರ್ಚೆಯ ವಿಷಯವಾಯಿತು. ಕೃಷಿಯಲ್ಲಿ ಸುಧಾರಿತ ತಳಿಗಳು, ಸುಧಾರಿತ ಯಂತ್ರಗಳ ಬಳಕೆ, ಹೊಸ ಮಾದರಿಯ ಕೃಷಿಯನ್ನೂ ಪರಿಚಯ ಮಾಡಬೇಕು. ಒಟ್ಟಾರೆ ದೇಶದ ಆಹಾರ ಭದ್ರತೆಗೆ ದೇಶದಲ್ಲಿಯೇ ಸುದೃಢವಾಗಿ ಕೃಷಿ ಬೆಳವಣಿಗೆಯೇ ಪರಿಹಾರ ಎನ್ನುವುದನ್ನು ಈ ಶೃಂಗಸಭೆ ಕಂಡುಕೊಂಡಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror