Advertisement
ವಿಶೇಷ ವರದಿಗಳು

#Agriculture | ಅಂತರಾಷ್ಟ್ರೀಯ ಮಟ್ಟದಲ್ಲೂ ಆರಂಭವಾಗಿದೆ ಆಹಾರ ಭದ್ರತೆಯ ಬಿಸಿ | ಆಹಾರ ಉತ್ಪಾದನೆಯನ್ನು ಹೆಚ್ಚಿಸಲು ಗಮನಹರಿಸಿದ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್ |

Share

ಪ್ರಪಂಚದಲ್ಲಿ ಆಹಾರ ಭದ್ರತೆಯ ಬಗ್ಗೆ ಹೆಚ್ಚಿನ ಗಮನಹರಿಸುವ ಕೆಲಸ ಆರಂಭವಾಗಿದೆ. ಕೃಷಿ(Agriculture) ಕ್ಷೇತ್ರದ ಬೆಳವಣಿಗೆ, ಕೃಷಿ ಜಿಡಿಪಿ ಹೆಚ್ಚಳದ ಕಡೆಗೆ ಎಲ್ಲಾ ಒಕ್ಕೂಟಗಳೂ ಕೆಲಸ ಆರಂಭ ಮಾಡಿದೆ. ಇದೀಗ  ಆಫ್ರಿಕಾದ ಕೃಷಿ ವಲಯದ ನೀತಿ ನಿರೂಪಕರು ಆಫ್ರಿಕಾ ಖಂಡದಲ್ಲಿ ಆಹಾರ ಉತ್ಪಾದನೆಯನ್ನು ಹೆಚ್ಚಿಸಲು, ಪ್ರಾಯೋಗಿಕ ಕ್ರಮಗಳನ್ನು ಜಾರಿಗೆ ತರಲು ನಿರ್ಣಾಯಕವಾಗಿ ಕಾರ್ಯನಿರ್ವಹಿಸಲುನಿರ್ಧರಿಸಿದ್ದಾರೆ.

ಆಫ್ರಿಕಾದ ರುವಾಂಡಾದ ರಾಜಧಾನಿ ಕಿಗಾಲಿಯಲ್ಲಿ ನಡೆದ ಐದು ದಿನಗಳ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್  ಶೃಂಗಸಭೆಯ ಸಮಾರೋಪದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಆಹಾರ ಭದ್ರತೆಯನ್ನು ನಿರ್ಮಿಸಲು ಮತ್ತು ಆಹಾರ ವ್ಯವಸ್ಥೆಗಳನ್ನು ಪರಿವರ್ತಿಸಲು ಮತ್ತು ಆಫ್ರಿಕಾದಲ್ಲಿ ಸುಸ್ಥಿರ, ಲಾಭದಾಯಕ ಮತ್ತು ಕೃಷಿ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಯತ್ನಗಳನ್ನು ಬೆಂಬಲಿಸಲು ಮತ್ತು ಚಾಲನೆ ಮಾಡಲು ಅಗತ್ಯ ಕ್ರಮಗಳ ಕಡೆಗೆ ಹೆಜ್ಜೆ ಇರಿಸಿದ್ದಾರೆ. ಕೃಷಿಗೆ ಹೆಚ್ಚಿನ ಸಂಪನ್ಮೂಲಗಳನ್ನು ನಿರ್ದೇಶಿಸುವ ತಮ್ಮ ಸಂಕಲ್ಪವನ್ನು ಅಲ್ಲಿನ ಕಾಯಕರು ಪ್ರಕಟಿಸಿದ್ದಾರೆ.

ಶೃಂಗಸಭೆಯಲ್ಲಿ  ರುವಾಂಡಾದ ಕೃಷಿ ಸಚಿವ ಜೆರಾಲ್ಡಿನ್ ಮುಕೇಶಿಮಾನಾ ಅವರು ಮಾತನಾಡುತ್ತಾ, ಆಹಾರ ಭದ್ರತೆಯ ವಿಷಯದಲ್ಲಿ ಇನ್ನು ಮುಂದೆ ನಾವು ಮಾತನಾಡುವುದಿಲ್ಲ, ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದರು. ಅಲ್ಲದೆ, ಕಡಿಮೆ ಪದಗಳನ್ನು ಬಳಸುತ್ತೇವೆ ಮತ್ತು ಹೆಚ್ಚಿನ ಕ್ರಿಯೆಗಳನ್ನು ಮಾಡುತ್ತೇವೆ ಎನ್ನುವುದನ್ನು ಹೇಳಿದ್ದರು.

ಶೃಂಗ ಸಭೆಯಲ್ಲಿ ಕೃಷಿ ಅಭಿವೃದ್ಧಿಗೆ ಪ್ರಮುಖವಾಗಿ ರೈತರು ಕೈಗೆಟುಕುವ, ಉತ್ಪಾದಕ, ಹವಾಮಾನ/ಕೀಟ-ನಿರೋಧಕ ಬೀಜಗಳ ತಯಾರಿ ಅಗತ್ಯವಿದೆ ಎನ್ನುವುದನ್ನು ಚರ್ಚಿಸಲಾಯಿತು. ಅದರ ಜೊತೆಗೆ ಮಹಿಳಾ ನೇತೃತ್ವದ ಎಸ್‌ಎಂಇಗಳಿಗೆ 25 ಪ್ರತಿಶತದಷ್ಟು ಹಣವನ್ನು ನೀಡಬೇಕು. ಇದು ಮಹಿಳೆಯರು ಮತ್ತು ಯುವಕರಿಗೆ ಕೃಷಿಯಲ್ಲಿ ಅಭಿವೃದ್ಧಿ ಹೊಂದಲು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎನ್ನುವುದು ಕೂಡಾ ಗಂಭೀರ ಚರ್ಚೆಯ ವಿಷಯವಾಯಿತು. ಕೃಷಿಯಲ್ಲಿ ಸುಧಾರಿತ ತಳಿಗಳು, ಸುಧಾರಿತ ಯಂತ್ರಗಳ ಬಳಕೆ, ಹೊಸ ಮಾದರಿಯ ಕೃಷಿಯನ್ನೂ ಪರಿಚಯ ಮಾಡಬೇಕು. ಒಟ್ಟಾರೆ ದೇಶದ ಆಹಾರ ಭದ್ರತೆಗೆ ದೇಶದಲ್ಲಿಯೇ ಸುದೃಢವಾಗಿ ಕೃಷಿ ಬೆಳವಣಿಗೆಯೇ ಪರಿಹಾರ ಎನ್ನುವುದನ್ನು ಈ ಶೃಂಗಸಭೆ ಕಂಡುಕೊಂಡಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

10 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

18 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

20 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago