Advertisement
ವಿಶೇಷ ವರದಿಗಳು

#Agriculture | ಅಂತರಾಷ್ಟ್ರೀಯ ಮಟ್ಟದಲ್ಲೂ ಆರಂಭವಾಗಿದೆ ಆಹಾರ ಭದ್ರತೆಯ ಬಿಸಿ | ಆಹಾರ ಉತ್ಪಾದನೆಯನ್ನು ಹೆಚ್ಚಿಸಲು ಗಮನಹರಿಸಿದ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್ |

Share

ಪ್ರಪಂಚದಲ್ಲಿ ಆಹಾರ ಭದ್ರತೆಯ ಬಗ್ಗೆ ಹೆಚ್ಚಿನ ಗಮನಹರಿಸುವ ಕೆಲಸ ಆರಂಭವಾಗಿದೆ. ಕೃಷಿ(Agriculture) ಕ್ಷೇತ್ರದ ಬೆಳವಣಿಗೆ, ಕೃಷಿ ಜಿಡಿಪಿ ಹೆಚ್ಚಳದ ಕಡೆಗೆ ಎಲ್ಲಾ ಒಕ್ಕೂಟಗಳೂ ಕೆಲಸ ಆರಂಭ ಮಾಡಿದೆ. ಇದೀಗ  ಆಫ್ರಿಕಾದ ಕೃಷಿ ವಲಯದ ನೀತಿ ನಿರೂಪಕರು ಆಫ್ರಿಕಾ ಖಂಡದಲ್ಲಿ ಆಹಾರ ಉತ್ಪಾದನೆಯನ್ನು ಹೆಚ್ಚಿಸಲು, ಪ್ರಾಯೋಗಿಕ ಕ್ರಮಗಳನ್ನು ಜಾರಿಗೆ ತರಲು ನಿರ್ಣಾಯಕವಾಗಿ ಕಾರ್ಯನಿರ್ವಹಿಸಲುನಿರ್ಧರಿಸಿದ್ದಾರೆ.

ಆಫ್ರಿಕಾದ ರುವಾಂಡಾದ ರಾಜಧಾನಿ ಕಿಗಾಲಿಯಲ್ಲಿ ನಡೆದ ಐದು ದಿನಗಳ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್  ಶೃಂಗಸಭೆಯ ಸಮಾರೋಪದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಆಹಾರ ಭದ್ರತೆಯನ್ನು ನಿರ್ಮಿಸಲು ಮತ್ತು ಆಹಾರ ವ್ಯವಸ್ಥೆಗಳನ್ನು ಪರಿವರ್ತಿಸಲು ಮತ್ತು ಆಫ್ರಿಕಾದಲ್ಲಿ ಸುಸ್ಥಿರ, ಲಾಭದಾಯಕ ಮತ್ತು ಕೃಷಿ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಯತ್ನಗಳನ್ನು ಬೆಂಬಲಿಸಲು ಮತ್ತು ಚಾಲನೆ ಮಾಡಲು ಅಗತ್ಯ ಕ್ರಮಗಳ ಕಡೆಗೆ ಹೆಜ್ಜೆ ಇರಿಸಿದ್ದಾರೆ. ಕೃಷಿಗೆ ಹೆಚ್ಚಿನ ಸಂಪನ್ಮೂಲಗಳನ್ನು ನಿರ್ದೇಶಿಸುವ ತಮ್ಮ ಸಂಕಲ್ಪವನ್ನು ಅಲ್ಲಿನ ಕಾಯಕರು ಪ್ರಕಟಿಸಿದ್ದಾರೆ.

ಶೃಂಗಸಭೆಯಲ್ಲಿ  ರುವಾಂಡಾದ ಕೃಷಿ ಸಚಿವ ಜೆರಾಲ್ಡಿನ್ ಮುಕೇಶಿಮಾನಾ ಅವರು ಮಾತನಾಡುತ್ತಾ, ಆಹಾರ ಭದ್ರತೆಯ ವಿಷಯದಲ್ಲಿ ಇನ್ನು ಮುಂದೆ ನಾವು ಮಾತನಾಡುವುದಿಲ್ಲ, ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದರು. ಅಲ್ಲದೆ, ಕಡಿಮೆ ಪದಗಳನ್ನು ಬಳಸುತ್ತೇವೆ ಮತ್ತು ಹೆಚ್ಚಿನ ಕ್ರಿಯೆಗಳನ್ನು ಮಾಡುತ್ತೇವೆ ಎನ್ನುವುದನ್ನು ಹೇಳಿದ್ದರು.

ಶೃಂಗ ಸಭೆಯಲ್ಲಿ ಕೃಷಿ ಅಭಿವೃದ್ಧಿಗೆ ಪ್ರಮುಖವಾಗಿ ರೈತರು ಕೈಗೆಟುಕುವ, ಉತ್ಪಾದಕ, ಹವಾಮಾನ/ಕೀಟ-ನಿರೋಧಕ ಬೀಜಗಳ ತಯಾರಿ ಅಗತ್ಯವಿದೆ ಎನ್ನುವುದನ್ನು ಚರ್ಚಿಸಲಾಯಿತು. ಅದರ ಜೊತೆಗೆ ಮಹಿಳಾ ನೇತೃತ್ವದ ಎಸ್‌ಎಂಇಗಳಿಗೆ 25 ಪ್ರತಿಶತದಷ್ಟು ಹಣವನ್ನು ನೀಡಬೇಕು. ಇದು ಮಹಿಳೆಯರು ಮತ್ತು ಯುವಕರಿಗೆ ಕೃಷಿಯಲ್ಲಿ ಅಭಿವೃದ್ಧಿ ಹೊಂದಲು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎನ್ನುವುದು ಕೂಡಾ ಗಂಭೀರ ಚರ್ಚೆಯ ವಿಷಯವಾಯಿತು. ಕೃಷಿಯಲ್ಲಿ ಸುಧಾರಿತ ತಳಿಗಳು, ಸುಧಾರಿತ ಯಂತ್ರಗಳ ಬಳಕೆ, ಹೊಸ ಮಾದರಿಯ ಕೃಷಿಯನ್ನೂ ಪರಿಚಯ ಮಾಡಬೇಕು. ಒಟ್ಟಾರೆ ದೇಶದ ಆಹಾರ ಭದ್ರತೆಗೆ ದೇಶದಲ್ಲಿಯೇ ಸುದೃಢವಾಗಿ ಕೃಷಿ ಬೆಳವಣಿಗೆಯೇ ಪರಿಹಾರ ಎನ್ನುವುದನ್ನು ಈ ಶೃಂಗಸಭೆ ಕಂಡುಕೊಂಡಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 hour ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

2 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

2 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

2 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

17 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

17 hours ago