Advertisement
ವಿಶೇಷ ವರದಿಗಳು

#Agriculture | ಅಂತರಾಷ್ಟ್ರೀಯ ಮಟ್ಟದಲ್ಲೂ ಆರಂಭವಾಗಿದೆ ಆಹಾರ ಭದ್ರತೆಯ ಬಿಸಿ | ಆಹಾರ ಉತ್ಪಾದನೆಯನ್ನು ಹೆಚ್ಚಿಸಲು ಗಮನಹರಿಸಿದ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್ |

Share

ಪ್ರಪಂಚದಲ್ಲಿ ಆಹಾರ ಭದ್ರತೆಯ ಬಗ್ಗೆ ಹೆಚ್ಚಿನ ಗಮನಹರಿಸುವ ಕೆಲಸ ಆರಂಭವಾಗಿದೆ. ಕೃಷಿ(Agriculture) ಕ್ಷೇತ್ರದ ಬೆಳವಣಿಗೆ, ಕೃಷಿ ಜಿಡಿಪಿ ಹೆಚ್ಚಳದ ಕಡೆಗೆ ಎಲ್ಲಾ ಒಕ್ಕೂಟಗಳೂ ಕೆಲಸ ಆರಂಭ ಮಾಡಿದೆ. ಇದೀಗ  ಆಫ್ರಿಕಾದ ಕೃಷಿ ವಲಯದ ನೀತಿ ನಿರೂಪಕರು ಆಫ್ರಿಕಾ ಖಂಡದಲ್ಲಿ ಆಹಾರ ಉತ್ಪಾದನೆಯನ್ನು ಹೆಚ್ಚಿಸಲು, ಪ್ರಾಯೋಗಿಕ ಕ್ರಮಗಳನ್ನು ಜಾರಿಗೆ ತರಲು ನಿರ್ಣಾಯಕವಾಗಿ ಕಾರ್ಯನಿರ್ವಹಿಸಲುನಿರ್ಧರಿಸಿದ್ದಾರೆ.

ಆಫ್ರಿಕಾದ ರುವಾಂಡಾದ ರಾಜಧಾನಿ ಕಿಗಾಲಿಯಲ್ಲಿ ನಡೆದ ಐದು ದಿನಗಳ ಆಫ್ರಿಕಾ ಗ್ರೀನ್ ರೆವಲ್ಯೂಷನ್ ಫೋರಮ್  ಶೃಂಗಸಭೆಯ ಸಮಾರೋಪದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಆಹಾರ ಭದ್ರತೆಯನ್ನು ನಿರ್ಮಿಸಲು ಮತ್ತು ಆಹಾರ ವ್ಯವಸ್ಥೆಗಳನ್ನು ಪರಿವರ್ತಿಸಲು ಮತ್ತು ಆಫ್ರಿಕಾದಲ್ಲಿ ಸುಸ್ಥಿರ, ಲಾಭದಾಯಕ ಮತ್ತು ಕೃಷಿ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಯತ್ನಗಳನ್ನು ಬೆಂಬಲಿಸಲು ಮತ್ತು ಚಾಲನೆ ಮಾಡಲು ಅಗತ್ಯ ಕ್ರಮಗಳ ಕಡೆಗೆ ಹೆಜ್ಜೆ ಇರಿಸಿದ್ದಾರೆ. ಕೃಷಿಗೆ ಹೆಚ್ಚಿನ ಸಂಪನ್ಮೂಲಗಳನ್ನು ನಿರ್ದೇಶಿಸುವ ತಮ್ಮ ಸಂಕಲ್ಪವನ್ನು ಅಲ್ಲಿನ ಕಾಯಕರು ಪ್ರಕಟಿಸಿದ್ದಾರೆ.

ಶೃಂಗಸಭೆಯಲ್ಲಿ  ರುವಾಂಡಾದ ಕೃಷಿ ಸಚಿವ ಜೆರಾಲ್ಡಿನ್ ಮುಕೇಶಿಮಾನಾ ಅವರು ಮಾತನಾಡುತ್ತಾ, ಆಹಾರ ಭದ್ರತೆಯ ವಿಷಯದಲ್ಲಿ ಇನ್ನು ಮುಂದೆ ನಾವು ಮಾತನಾಡುವುದಿಲ್ಲ, ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದರು. ಅಲ್ಲದೆ, ಕಡಿಮೆ ಪದಗಳನ್ನು ಬಳಸುತ್ತೇವೆ ಮತ್ತು ಹೆಚ್ಚಿನ ಕ್ರಿಯೆಗಳನ್ನು ಮಾಡುತ್ತೇವೆ ಎನ್ನುವುದನ್ನು ಹೇಳಿದ್ದರು.

ಶೃಂಗ ಸಭೆಯಲ್ಲಿ ಕೃಷಿ ಅಭಿವೃದ್ಧಿಗೆ ಪ್ರಮುಖವಾಗಿ ರೈತರು ಕೈಗೆಟುಕುವ, ಉತ್ಪಾದಕ, ಹವಾಮಾನ/ಕೀಟ-ನಿರೋಧಕ ಬೀಜಗಳ ತಯಾರಿ ಅಗತ್ಯವಿದೆ ಎನ್ನುವುದನ್ನು ಚರ್ಚಿಸಲಾಯಿತು. ಅದರ ಜೊತೆಗೆ ಮಹಿಳಾ ನೇತೃತ್ವದ ಎಸ್‌ಎಂಇಗಳಿಗೆ 25 ಪ್ರತಿಶತದಷ್ಟು ಹಣವನ್ನು ನೀಡಬೇಕು. ಇದು ಮಹಿಳೆಯರು ಮತ್ತು ಯುವಕರಿಗೆ ಕೃಷಿಯಲ್ಲಿ ಅಭಿವೃದ್ಧಿ ಹೊಂದಲು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎನ್ನುವುದು ಕೂಡಾ ಗಂಭೀರ ಚರ್ಚೆಯ ವಿಷಯವಾಯಿತು. ಕೃಷಿಯಲ್ಲಿ ಸುಧಾರಿತ ತಳಿಗಳು, ಸುಧಾರಿತ ಯಂತ್ರಗಳ ಬಳಕೆ, ಹೊಸ ಮಾದರಿಯ ಕೃಷಿಯನ್ನೂ ಪರಿಚಯ ಮಾಡಬೇಕು. ಒಟ್ಟಾರೆ ದೇಶದ ಆಹಾರ ಭದ್ರತೆಗೆ ದೇಶದಲ್ಲಿಯೇ ಸುದೃಢವಾಗಿ ಕೃಷಿ ಬೆಳವಣಿಗೆಯೇ ಪರಿಹಾರ ಎನ್ನುವುದನ್ನು ಈ ಶೃಂಗಸಭೆ ಕಂಡುಕೊಂಡಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

8 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

9 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

15 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

15 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

17 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

18 hours ago