ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈ ಮರೆಯಬೇಡಿ. ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ ಈ ಕುರಿತು ಗಮನಹರಿಸಿ ಎಂದು ಆರೋಗ್ಯ ಇಲಾಖೆ ಮಾಹಿತಿ ರವಾನೆ ಮಾಡಿದೆ.
ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.
ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಹೇಳಲಾಗಿದೆ.
ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ. ಮತದಾನ ಮಾಡುವವರೂ ಈ ಕುರಿತು ಜಾಗೃತರಾಗಿರಬೇಕು. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿ ಮತದಾನ ಮಾಡಬೇಕು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…