ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈ ಮರೆಯಬೇಡಿ. ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ ಈ ಕುರಿತು ಗಮನಹರಿಸಿ ಎಂದು ಆರೋಗ್ಯ ಇಲಾಖೆ ಮಾಹಿತಿ ರವಾನೆ ಮಾಡಿದೆ.
ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.
ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಹೇಳಲಾಗಿದೆ.
ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ. ಮತದಾನ ಮಾಡುವವರೂ ಈ ಕುರಿತು ಜಾಗೃತರಾಗಿರಬೇಕು. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿ ಮತದಾನ ಮಾಡಬೇಕು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…