ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈ ಮರೆಯಬೇಡಿ. ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ ಈ ಕುರಿತು ಗಮನಹರಿಸಿ ಎಂದು ಆರೋಗ್ಯ ಇಲಾಖೆ ಮಾಹಿತಿ ರವಾನೆ ಮಾಡಿದೆ.
ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.
ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಹೇಳಲಾಗಿದೆ.
ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ. ಮತದಾನ ಮಾಡುವವರೂ ಈ ಕುರಿತು ಜಾಗೃತರಾಗಿರಬೇಕು. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿ ಮತದಾನ ಮಾಡಬೇಕು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…