Advertisement
MIRROR FOCUS

ಕೋಲಾರದಲ್ಲಿ ಪಶು ಸಂಜೀವಿನಿ ಯೋಜನೆ ಅನುಷ್ಠಾನ | ಪಶು ಸಖಿಯರಿಗೆ ತರಬೇತಿ |

Share

ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರು ಹಾಗೂ ಪಶು ವೈದ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಪಶು ಸಖಿಯರನ್ನು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಒಟ್ಟು 154 ಗ್ರಾಮ ಪಂಚಾಯತ್ ಗಳಿದ್ದು, ಈಗಾಗಲೇ 125 ಪಶು ಸಖಿಯರನ್ನು ಆಯ್ಕೆ ಮಾಡಿ, ತರಬೇತಿ ನೀಡಲಾಗುತ್ತಿದೆ.  ‌ಪಶು ಸಖಿಯರು ಪಶು ಸಂಗೋಪನಾ ಇಲಾಖೆಯ ಯೋಜನೆಗಳು, ಸಹಾಯಧನ ನೀಡುವ ಕುರಿತು  ರೈತರಿಗೆ ಮಾಹಿತಿ ನೀಡುತ್ತಾರೆ. ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ ಪಶುಸಂಗೋಪನಾ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ  ಒದಗಿಸುವ ಉದ್ದೇಶವನ್ನು ಕೂಡಾ ಇಲ್ಲಿ  ಹೊಂದಲಾಗಿದೆ.

ಪಶು ಸಖಿಯರಿಗೆ ಕನಿಷ್ಠ 18 ದಿನಗಳ ಕಾಲ ಜಾನುವಾರುಗಳ ಪ್ರಾಥಮಿಕ ಚಿಕಿತ್ಸೆ,  ಪೋಷಣೆ,  ಹೆಚ್ಚುವರಿ ಹಾಲಿನ ಉತ್ಪಾದನೆ ಸೇರಿದಂತೆ ಇಲಾಖೆಯ  ಯೋಜನೆಗಳ ಕುರಿತು ತರಬೇತಿ ನೀಡಲಾಗುತ್ತದೆ ಎಂದು ಹೇಳುತ್ತಾರೆ   ಪಶು ಇಲಾಖೆಯ ಉಪ ನಿರ್ದೇಶಕ ತುಳಿಸಿ ಗಂಗಾರಾಮ್.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

9 minutes ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 hour ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

2 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

2 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

2 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

6 hours ago