Advertisement
MIRROR FOCUS

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ

Share

ಕ್ಯೂಆರ್ ಕೋಡ್  ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ ಕೇಂದ್ರ ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯನ್ನು ರೂಪಿಸಿದೆ. ಇಲ್ಲಿನ ಗೇರು ನರ್ಸರಿಯಲ್ಲಿ ಮಾರಾಟ ಮಾಡುವ ಎಲ್ಲ ತಳಿಗಳಿಗೂ ಕ್ಯೂಆರ್ ಕೋಡ್ ಬೋರ್ಡ್ ಅಳವಡಿಸುವ ಕಾರ್ಯಕ್ಕೆ ಸಂಸ್ಥೆಯ ನಿರ್ದೇಶಕ ಡಾ. ದಿನಕರ ಅಡಿಗ ಚಾಲನೆ ನೀಡಿದರು.

ನರ್ಸರಿಗೆ ಭೇಟಿ ನೀಡುವ ಆಸಕ್ತರು ಯಾವುದೇ ತಳಿಯ ಮಾಹಿತಿಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಿಳಿಯಬಹುದು. ಇದನ್ನು ಎಷ್ಟು ಜನ ಬಳಸಿದ್ದಾರೆ ಎಂಬ ಮಾಹಿತಿ ಕೇಂದ್ರಕ್ಕೆ ಸಿಗುವ ಹಾಗೆಯೂ ವಿನ್ಯಾಸವಿರುವುದರಿಂದ ವ್ಯವಸ್ಥೆಯ ಒಟ್ಟೂ ಉಪಯುಕ್ತತೆ ಕೇಂದ್ರಕ್ಕೆ ಮನವರಿಕೆ ಆಗಲಿದೆ.

ಜೊತೆಗೆ ಇಡೀ ರಾಷ್ಟ್ರದ ವಿವಿಧ ಗೇರು ಸಂಶೋಧನಾ ಕೇಂದ್ರಗಳಲ್ಲಿ ಮಾರಾಟ ಮಾಡುವ ವಿವಿಧ ಗೇರು ತಳಿಗಳ ಮಾಹಿತಿ ನೀಡುವ ಕ್ಯೂ ಆರ್ ಕೋಡ್ ಗಳನ್ನು ಒಂದೆಡೆ ಸಿಗುವಂತೆ ಮಾಡಿದ್ದಾರೆ. ಈ ಕೊಂಡಿಯ ಮೂಲಕ ಅವನ್ನು ನೀವು ನೋಡಬಹುದು. https://cashew.icar.gov.in/wp-content/uploads/2024/11/QR_for_cashew_varieties.pdf

ಈ ಸಂದರ್ಭದಲ್ಲಿ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಿದ ತಂಡದ ಮುಖ್ಯಸ್ಥ ಡಾ. ಮೋಹನ್ ತಲಕಾಲುಕೊಪ್ಪ ಮತ್ತು ತಂಡದ ಸದಸ್ಯರಾದ ಜಿಜೋ ಜೊಸೆಫ್, ತ್ರಿವೇಣಿ, ಪ್ರಕಾಶ್ ಭಟ್ ಮತ್ತು ರಮ್ಯಾ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗೆ :  ಡಾ. ಮೋಹನ್ – 99022 73468

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

10 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago