Advertisement
MIRROR FOCUS

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ

Share

ಕ್ಯೂಆರ್ ಕೋಡ್  ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ ಕೇಂದ್ರ ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯನ್ನು ರೂಪಿಸಿದೆ. ಇಲ್ಲಿನ ಗೇರು ನರ್ಸರಿಯಲ್ಲಿ ಮಾರಾಟ ಮಾಡುವ ಎಲ್ಲ ತಳಿಗಳಿಗೂ ಕ್ಯೂಆರ್ ಕೋಡ್ ಬೋರ್ಡ್ ಅಳವಡಿಸುವ ಕಾರ್ಯಕ್ಕೆ ಸಂಸ್ಥೆಯ ನಿರ್ದೇಶಕ ಡಾ. ದಿನಕರ ಅಡಿಗ ಚಾಲನೆ ನೀಡಿದರು.

ನರ್ಸರಿಗೆ ಭೇಟಿ ನೀಡುವ ಆಸಕ್ತರು ಯಾವುದೇ ತಳಿಯ ಮಾಹಿತಿಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಿಳಿಯಬಹುದು. ಇದನ್ನು ಎಷ್ಟು ಜನ ಬಳಸಿದ್ದಾರೆ ಎಂಬ ಮಾಹಿತಿ ಕೇಂದ್ರಕ್ಕೆ ಸಿಗುವ ಹಾಗೆಯೂ ವಿನ್ಯಾಸವಿರುವುದರಿಂದ ವ್ಯವಸ್ಥೆಯ ಒಟ್ಟೂ ಉಪಯುಕ್ತತೆ ಕೇಂದ್ರಕ್ಕೆ ಮನವರಿಕೆ ಆಗಲಿದೆ.

ಜೊತೆಗೆ ಇಡೀ ರಾಷ್ಟ್ರದ ವಿವಿಧ ಗೇರು ಸಂಶೋಧನಾ ಕೇಂದ್ರಗಳಲ್ಲಿ ಮಾರಾಟ ಮಾಡುವ ವಿವಿಧ ಗೇರು ತಳಿಗಳ ಮಾಹಿತಿ ನೀಡುವ ಕ್ಯೂ ಆರ್ ಕೋಡ್ ಗಳನ್ನು ಒಂದೆಡೆ ಸಿಗುವಂತೆ ಮಾಡಿದ್ದಾರೆ. ಈ ಕೊಂಡಿಯ ಮೂಲಕ ಅವನ್ನು ನೀವು ನೋಡಬಹುದು. https://cashew.icar.gov.in/wp-content/uploads/2024/11/QR_for_cashew_varieties.pdf

ಈ ಸಂದರ್ಭದಲ್ಲಿ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಿದ ತಂಡದ ಮುಖ್ಯಸ್ಥ ಡಾ. ಮೋಹನ್ ತಲಕಾಲುಕೊಪ್ಪ ಮತ್ತು ತಂಡದ ಸದಸ್ಯರಾದ ಜಿಜೋ ಜೊಸೆಫ್, ತ್ರಿವೇಣಿ, ಪ್ರಕಾಶ್ ಭಟ್ ಮತ್ತು ರಮ್ಯಾ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗೆ :  ಡಾ. ಮೋಹನ್ – 99022 73468

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago