Advertisement
MIRROR FOCUS

ಕೋಲಾರದಲ್ಲಿ ಸೌರ ವಿದ್ಯುತ್ ಯೋಜನೆ ಜಾರಿ | ಒಣಗುತ್ತಿರುವ ತೋಟವನ್ನು ಉಳಿಸಿಕೊಂಡ ರೈತರು |

Share

ಬೆಳೆ ಬೆಳೆದು ಫಲ ನೀಡುವ ಹೊತ್ತಿಗೆ ನೀರುಣಿಸಲಾಗದೆ ಇಡೀ ಫಸಲು ಒಣಗುತ್ತಿರುವ ಸನ್ನಿವೇಶವನ್ನು ಕೋಲಾರದ ಕೆಲವು ಕಡೆ ರೈತರು ಅನುಭವಿಸುತ್ತಿದ್ದರು. ನೀರಿದ್ದರೂ ವಿದ್ಯುತ್‌ ಪೂರೈಕೆಯಲ್ಲಿನ ವ್ಯತ್ಯಯವೇ ಬೆಳೆ ನಾಶಕ್ಕೆ ಕಾರಣವಾಗಿತ್ತು.‌ ಈಗ ರಾಷ್ಟ್ರೀಯ ವಿಕಾಸ ಕಾರ್ಯಕ್ರಮದಡಿ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸಿ ಬಳಿಕ ನಿರಂತರವಾಗಿ ನೀರು ಹಾಯಿಸುವ ಮೂಲಕ ಕೃಷಿಯನ್ನು ಉಳಿಸಿಕೊಂಡು ಉತ್ತಮ ಫಸಲು ತೆಗೆಯುತ್ತಿದ್ದಾರೆ ರೈತರು.

ರಾಜ್ಯದಲ್ಲಿ ಕೋಲಾರ ಅತಿ ಹೆಚ್ಚು ಕೊಳವೆ ಬಾವಿಗಳನ್ನು ಹೊಂದಿರುವ ಜಿಲ್ಲೆ.  ಆದರೆ ಸಮರ್ಪಕವಾದ ವಿದ್ಯುತ್ ಪೂರೈಕೆ ಆಗದೆ ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರವಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಕಾಸ ಕಾರ್ಯಕ್ರಮದಡಿ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೆ ತಂದಿದ್ದು, ಕೋಲಾರದಲ್ಲಿ ಈಗ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.

ಕೋಲಾರ ಜಿಲ್ಲೆಯಲ್ಲಿ  ರೈತರು ಕೊಳವಿ ಬಾವಿಗಳಿಗೆ ಅವಲಂಬಿತರಾಗಿದ್ದಾರೆ. ಆದರೆ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ಕೃಷಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಗಲು ರಾತ್ರಿ ತೋಟಗಳಿಗೆ ನೀರು ಹರಿಸಲು ರೈತರು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ರಾಷ್ಟ್ರೀಯ ಕೃಷಿ ವಿಕಾಸ ಕಾರ್ಯಕ್ರಮದಡಿ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಸೌರ ವಿದ್ಯುತ್ ನಿರಂತರವಾಗಿ ನವೀಕರಿಸಬಹುದಾದ ಇಂಧನವಾಗಿದೆ. ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ.

ರೈತರ ತೋಟದಲ್ಲಿ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಿ ಕೃಷಿ ಹೊಂಡ ಅಥವಾ ಕೊಳವೆ  ಬಾವಿಯಿಂದ ತೋಟಗಳಿಗೆ ನೀರು ಹರಿಸಲಾಗುತ್ತಿದೆ. ತಾಲೂಕಿನ ಚದುಮನಹಳ್ಳಿ ಗ್ರಾಮದ ರೈತ ನಾರಾಯಣಸ್ವಾಮಿ ತಮ್ಮ ಸೀಬೆ ತೋಟದಲ್ಲಿ ಸೌರ ವಿದ್ಯುತ್ ಫಲಕ ಅಳವಡಿಸಿ ತೋಟಕ್ಕೆ ನೀರು ಹಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಎಕರೆ ಸೀಬೆ ಬೆಳೆದಿದ್ದು, ವಿದ್ಯುತ್ ಸಮರ್ಪಕ ಪೂರೈಕೆಯಾಗದೇ ಸರಿಯಾದ ಸಮಯಕ್ಕೆ ಬೆಳೆಗೆ ನೀರು ಪೂರೈಕೆ ಮಾಡಲು ಆಗುತ್ತಿರಲಿಲ್ಲ. ತೋಟಗಾರಿಕೆ ಇಲಾಖೆಯವರು 5 ಕಿಲೋ ವ್ಯಾಟ್ ಸೋಲಾರ್ ವಿದ್ಯುತ್ ಹಾಕಿಕೊಳ್ಳುವಂತೆ ನೀಡಿದ ಸಲಹೆ ಮೇರೆಗೆ ಅನುಷ್ಟಾನ ಮಾಡಿದರು. ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸಿ ಬಳಿಕ ನಿರಂತರವಾಗಿ ನೀರು ಹರಿಸಲಾಗುತ್ತಿದೆ ಎನ್ನುತ್ತಾರೆ  ಯೋಜನೆಯ ಫಲಾನುಭವಿ ಗಗನ್.

ಸೌರ ವಿದ್ಯುತ್ ಯೋಜನೆ ಅವಳವಡಿಸಿಕೊಂಡ ಮೇಲೆ ಎರಡು ಎಕರೆ ಬೀನ್ಸ್ ಬೆಳೆದು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಾರೆ ಅದೇ ಗ್ರಾಮದ ಮೃತ್ಯುಂಜಯ.

ಸಹಾಯಕ ತೋಟಗಾರಿಕೆ ಅಧಿಕಾರಿ ನವೀನ್ ಕುಮಾರ್ ಯೋಜನೆಯ ಬಗ್ಗೆ ಮಾತನಾಡುತ್ತಾ, ಸೌರ್ ವಿದ್ಯುತ್ ಪಂಪ್ ಸೆಟ್ ಮೂಲಕ ಬೆಳಗ್ಗೆಯಿಂದ ಸಂಜೆಯ ತನಕ ನೀರು ಹರಿಸಬಹುದು ಎನ್ನುತ್ತಾರೆ.

ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಸಿದ್ದಾರೆ. ರೈತರು ಸೌರ ವಿದ್ಯುತ್ ಪಂಪ್ ಸೆಟ್ ಗಳನ್ನು ಅಳವಡಿಸಿ ಕಡಿಮೆ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ ಎನ್ನುತ್ತಾರೆ  ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ರವಿಕುಮಾರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

6 minutes ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

3 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

9 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

15 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

15 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

24 hours ago