ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಕೇಂದ್ರ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ.
ಕಳೆದ ತಿಂಗಳು ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆ ಘೋಷಣೆಯಾಗುವ ಮುನ್ನ ಸಿಎಎ ಜಾರಿ ಮಾಡೇ ಮಾಡುತ್ತೇವೆ ಹೇಳಿಕೆ ನೀಡಿದ್ದರು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ 2019(ಸಿಎಎ) ಜಾರಿಗೊಳಿಸಿ ರ ಅಧಿಸೂಚನೆ ಹೊರಡಿಸಿದ ನಂತರ ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಲವು ಭಾಗಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು,
2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
The Prime Minister Narendra Modi-led government on Monday announced the implementation of the Citizenship Amendment Act (CAA).
Source : News Agencies
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…