ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.
ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…