ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.
ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…
ದೇಶದ ವಿವಿದೆಡೆ ಮಾರ್ಚ್ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್ನಲ್ಲಿ ಅಸಾಮಾನ್ಯ ಹವಾಮಾನದಿಂದ…
ಹೋರ್ಮುಜ್ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…