Advertisement
MIRROR FOCUS

ಹಣ್ಣು–ತರಕಾರಿಗಳ ಹೊಸ ತಳಿ ಅಭಿವೃದ್ಧಿಗೆ ವಿಜ್ಞಾನಿಗಳಿಗೆ ಸಂದೇಶ

Share

ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.

ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

2 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

3 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

3 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

3 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

19 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

19 hours ago