ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.
ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…