Advertisement
MIRROR FOCUS

ಹಣ್ಣು–ತರಕಾರಿಗಳ ಹೊಸ ತಳಿ ಅಭಿವೃದ್ಧಿಗೆ ವಿಜ್ಞಾನಿಗಳಿಗೆ ಸಂದೇಶ

Share

ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

Advertisement

ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.

ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

1 hour ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago