Advertisement
MIRROR FOCUS

ಹಣ್ಣು–ತರಕಾರಿಗಳ ಹೊಸ ತಳಿ ಅಭಿವೃದ್ಧಿಗೆ ವಿಜ್ಞಾನಿಗಳಿಗೆ ಸಂದೇಶ

Share

ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.

ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

8 minutes ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

48 minutes ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

17 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago