ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.
ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…