ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.
ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…