Advertisement
MIRROR FOCUS

ಹಣ್ಣು–ತರಕಾರಿಗಳ ಹೊಸ ತಳಿ ಅಭಿವೃದ್ಧಿಗೆ ವಿಜ್ಞಾನಿಗಳಿಗೆ ಸಂದೇಶ

Share

ಯಾವುದೇ ಕೃಷಿ ಉತ್ಪನ್ನಗಳ ಆಮದುಗೆ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದೆ. ಅದರ ಬದಲು ದೇಶೀಯವಾಗಿ ಹಣ್ಣು ಮತ್ತು ತರಕಾರಿಗಳ ಹೊಸ, ಸುಸ್ಥಿರ ಹಾಗೂ ದೀರ್ಘಬಾಳಿಕೆಯ ತಳಿಗಳನ್ನು ಅಭಿವೃದ್ಧಿಪಡಿಸುವತ್ತ ವಿಜ್ಞಾನಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ಬೆಂಗಳೂರು ಸಮೀಪದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಗೆ ಭೇಟಿ ನೀಡಿದ ಸಚಿವರು, ಹಣ್ಣು–ತರಕಾರಿ ಬೆಳೆಗಳ ವಿವಿಧ ಮಾದರಿಗಳನ್ನು ವೀಕ್ಷಿಸಿ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ದೀರ್ಘಬಾಳಿಕೆಯ ಜೊತೆಗೆ ಸುಸ್ಥಿರತೆಯನ್ನು ಹೊಂದಿರುವ ತಳಿ ಅಭಿವೃದ್ಧಿಯತ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಸಂಸ್ಕರಣೆಗೆ ಅನುಕೂಲವಾಗುವ ಹಣ್ಣು ಮತ್ತು ತರಕಾರಿ ತಳಿಗಳ ಸಂಶೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ರೋಗ ನಿರೋಧಕ ಶಕ್ತಿಯುಳ್ಳ, ಹೆಚ್ಚು ಇಳುವರಿ ನೀಡುವ ಬೀಜಗಳನ್ನು ಅಭಿವೃದ್ಧಿಪಡಿಸಿ, ಇತ್ತೀಚೆಗೆ ನಾಲ್ಕು–ಐದು ವರ್ಷ ತೆಗೆದುಕೊಳ್ಳುತ್ತಿರುವ ಸಂಶೋಧನಾ ಅವಧಿಯನ್ನು ಎರಡು ವರ್ಷಗಳಿಗೆ ಇಳಿಸುವ ಪ್ರಯತ್ನ ನಡೆಯಬೇಕು ಎಂದು ಸಚಿವರು ಸೂಚಿಸಿದರು.

ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ಸಮಗ್ರ ಕೃಷಿ ಅಭಿವೃದ್ಧಿ ಮಾದರಿಯತ್ತ ಗಮನ ಹರಿಸಬೇಕು ಎಂದು ಹೇಳಿದ ಅವರು, ಐಐಎಚ್ಆರ್ ವತಿಯಿಂದ ವಿಶೇಷ ಚಿಂತನಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿ, ತಾವು ಅದರಲ್ಲಿ ಭಾಗವಹಿಸುವುದಾಗಿಯೂ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

9 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago