Advertisement
MIRROR FOCUS

ರಾಜ್ಯ ರಬ್ಬರು ಬೆಳೆಗಾರರ ಸಮಾವೇಶ | ಸಮಾವೇಶದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಏನು..?

Share

ಕರ್ನಾಟಕ ರಾಜ್ಯ ರಬ್ಬರು ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ಹಾಗೂ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಮತ್ತು ರಾಜ್ಯದ ರಬ್ಬರು ವ್ಯವಹಾರ ಮಾಡುವ ಸಹಕಾರ ಸಂಘಗಳು ಇವುಗಳ ಜಂಟಿ ಆಶ್ರಯದಲ್ಲಿ  ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ರಬ್ಬರ್‌ ಬೆಳೆಗಾರರ ಸಮಾವೇಶದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಬ್ಬರ್‌ ಬೆಳೆಗಾರರ ಹಿತದೃಷ್ಟಿಯಿಂದ ಈ ನಿರ್ಣಯ ಜಾರಿ ಮಾಡಲು ಇದೇ ವೇಳೆ ಒತ್ತಾಯ ಮಾಡಲಾಗಿದೆ.

ಕೇಂದ್ರ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು :

  1. ರಬ್ಬರ್ ನ್ನು ಒಂದು ಕೃಷಿ ಉತ್ಪನ್ನವೆಂದು ಮಾನ್ಯತೆ ಮಾಡಬೇಕು. ಪ್ರಕೃತ ರಬ್ಬರು ವಾಣಿಜ್ಯ ಇಲಾಖೆಯ ವ್ಯಾಪ್ತಿಯಲ್ಲಿದ್ದು ಇನ್ನು ಮುಂದೆ ಇದನ್ನು ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. RSS ಶೀಟ್ ರಬ್ಬರ್ ಗೆ ಕಿಲೋ ಒಂದರ ರೂಪಾಯಿ 258 ನ್ನು ಕನಿಷ್ಟ ದರವೆಂದು ನಿಗದಿಪಡಿಸಬೇಕು.
  3. ಕಾಂಪೌಂಡೆಡ್ ಅಥವಾ ಸಂಯುಕ್ತ ರಬ್ಬರಿನ ಆಮದಿನ ಸುಂಕವನ್ನು ಈಗಿರುವ 0 ಇಂದ ಶೇಕಡಾ 5 ಇರುವುದನ್ನು ಗರಿಷ್ಟ ಪ್ರಮಾಣಕ್ಕೆ ಏರಿಸಿ ಆಮದು ಬೆಲೆ ನಿರ್ಧರಿಸಬೇಕು.

ರಾಜ್ಯ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು : 

  1. ರಬ್ಬರು ಕೃಷಿಯನ್ನು ತೋಟಗಾರಿಕಾ ಬೆಳೆಯೆಂದು ಪರಿಗಣಿಸಿ ಅದನ್ನು ಆ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. ರಬ್ಬರ್ ಗೆ ಕನಿಷ್ಠ ಕಿಲೋ ಒಂದರ ರೂಪಾಯಿ 258 ರ ಬೆಂಬಲ ಬೆಲೆ ನಿಗದಿ ಮಾಡಿ ಬೆಳೆಗಾರರಿಗೆ ದೊರಕುವಂತೆ ಕ್ರಮಕೈಗೊಳ್ಳಬೇಕು.
  3. ರಬ್ಬರು ಕೃಷಿಗೂ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಿಕೊಡಬೇಕು.
  4. ರಾಜ್ಯದಲ್ಲಿ ರಬ್ಬರು ಬೆಲೆ ಸ್ಥಿರೀಕರಣ ನಿಧಿ ಸ್ಥಾಪನೆ ಆಗಬೇಕು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

7 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

8 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

9 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

22 hours ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

23 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

1 day ago