Advertisement
MIRROR FOCUS

ರಾಜ್ಯ ರಬ್ಬರು ಬೆಳೆಗಾರರ ಸಮಾವೇಶ | ಸಮಾವೇಶದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಏನು..?

Share

ಕರ್ನಾಟಕ ರಾಜ್ಯ ರಬ್ಬರು ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ಹಾಗೂ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಮತ್ತು ರಾಜ್ಯದ ರಬ್ಬರು ವ್ಯವಹಾರ ಮಾಡುವ ಸಹಕಾರ ಸಂಘಗಳು ಇವುಗಳ ಜಂಟಿ ಆಶ್ರಯದಲ್ಲಿ  ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ರಬ್ಬರ್‌ ಬೆಳೆಗಾರರ ಸಮಾವೇಶದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಬ್ಬರ್‌ ಬೆಳೆಗಾರರ ಹಿತದೃಷ್ಟಿಯಿಂದ ಈ ನಿರ್ಣಯ ಜಾರಿ ಮಾಡಲು ಇದೇ ವೇಳೆ ಒತ್ತಾಯ ಮಾಡಲಾಗಿದೆ.

ಕೇಂದ್ರ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು :

  1. ರಬ್ಬರ್ ನ್ನು ಒಂದು ಕೃಷಿ ಉತ್ಪನ್ನವೆಂದು ಮಾನ್ಯತೆ ಮಾಡಬೇಕು. ಪ್ರಕೃತ ರಬ್ಬರು ವಾಣಿಜ್ಯ ಇಲಾಖೆಯ ವ್ಯಾಪ್ತಿಯಲ್ಲಿದ್ದು ಇನ್ನು ಮುಂದೆ ಇದನ್ನು ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. RSS ಶೀಟ್ ರಬ್ಬರ್ ಗೆ ಕಿಲೋ ಒಂದರ ರೂಪಾಯಿ 258 ನ್ನು ಕನಿಷ್ಟ ದರವೆಂದು ನಿಗದಿಪಡಿಸಬೇಕು.
  3. ಕಾಂಪೌಂಡೆಡ್ ಅಥವಾ ಸಂಯುಕ್ತ ರಬ್ಬರಿನ ಆಮದಿನ ಸುಂಕವನ್ನು ಈಗಿರುವ 0 ಇಂದ ಶೇಕಡಾ 5 ಇರುವುದನ್ನು ಗರಿಷ್ಟ ಪ್ರಮಾಣಕ್ಕೆ ಏರಿಸಿ ಆಮದು ಬೆಲೆ ನಿರ್ಧರಿಸಬೇಕು.

ರಾಜ್ಯ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು : 

  1. ರಬ್ಬರು ಕೃಷಿಯನ್ನು ತೋಟಗಾರಿಕಾ ಬೆಳೆಯೆಂದು ಪರಿಗಣಿಸಿ ಅದನ್ನು ಆ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. ರಬ್ಬರ್ ಗೆ ಕನಿಷ್ಠ ಕಿಲೋ ಒಂದರ ರೂಪಾಯಿ 258 ರ ಬೆಂಬಲ ಬೆಲೆ ನಿಗದಿ ಮಾಡಿ ಬೆಳೆಗಾರರಿಗೆ ದೊರಕುವಂತೆ ಕ್ರಮಕೈಗೊಳ್ಳಬೇಕು.
  3. ರಬ್ಬರು ಕೃಷಿಗೂ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಿಕೊಡಬೇಕು.
  4. ರಾಜ್ಯದಲ್ಲಿ ರಬ್ಬರು ಬೆಲೆ ಸ್ಥಿರೀಕರಣ ನಿಧಿ ಸ್ಥಾಪನೆ ಆಗಬೇಕು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

9 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

9 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

23 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago