Advertisement
MIRROR FOCUS

ರಾಜ್ಯ ರಬ್ಬರು ಬೆಳೆಗಾರರ ಸಮಾವೇಶ | ಸಮಾವೇಶದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಏನು..?

Share

ಕರ್ನಾಟಕ ರಾಜ್ಯ ರಬ್ಬರು ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ಹಾಗೂ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಮತ್ತು ರಾಜ್ಯದ ರಬ್ಬರು ವ್ಯವಹಾರ ಮಾಡುವ ಸಹಕಾರ ಸಂಘಗಳು ಇವುಗಳ ಜಂಟಿ ಆಶ್ರಯದಲ್ಲಿ  ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ರಬ್ಬರ್‌ ಬೆಳೆಗಾರರ ಸಮಾವೇಶದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಬ್ಬರ್‌ ಬೆಳೆಗಾರರ ಹಿತದೃಷ್ಟಿಯಿಂದ ಈ ನಿರ್ಣಯ ಜಾರಿ ಮಾಡಲು ಇದೇ ವೇಳೆ ಒತ್ತಾಯ ಮಾಡಲಾಗಿದೆ.

ಕೇಂದ್ರ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು :

  1. ರಬ್ಬರ್ ನ್ನು ಒಂದು ಕೃಷಿ ಉತ್ಪನ್ನವೆಂದು ಮಾನ್ಯತೆ ಮಾಡಬೇಕು. ಪ್ರಕೃತ ರಬ್ಬರು ವಾಣಿಜ್ಯ ಇಲಾಖೆಯ ವ್ಯಾಪ್ತಿಯಲ್ಲಿದ್ದು ಇನ್ನು ಮುಂದೆ ಇದನ್ನು ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. RSS ಶೀಟ್ ರಬ್ಬರ್ ಗೆ ಕಿಲೋ ಒಂದರ ರೂಪಾಯಿ 258 ನ್ನು ಕನಿಷ್ಟ ದರವೆಂದು ನಿಗದಿಪಡಿಸಬೇಕು.
  3. ಕಾಂಪೌಂಡೆಡ್ ಅಥವಾ ಸಂಯುಕ್ತ ರಬ್ಬರಿನ ಆಮದಿನ ಸುಂಕವನ್ನು ಈಗಿರುವ 0 ಇಂದ ಶೇಕಡಾ 5 ಇರುವುದನ್ನು ಗರಿಷ್ಟ ಪ್ರಮಾಣಕ್ಕೆ ಏರಿಸಿ ಆಮದು ಬೆಲೆ ನಿರ್ಧರಿಸಬೇಕು.

ರಾಜ್ಯ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು : 

  1. ರಬ್ಬರು ಕೃಷಿಯನ್ನು ತೋಟಗಾರಿಕಾ ಬೆಳೆಯೆಂದು ಪರಿಗಣಿಸಿ ಅದನ್ನು ಆ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. ರಬ್ಬರ್ ಗೆ ಕನಿಷ್ಠ ಕಿಲೋ ಒಂದರ ರೂಪಾಯಿ 258 ರ ಬೆಂಬಲ ಬೆಲೆ ನಿಗದಿ ಮಾಡಿ ಬೆಳೆಗಾರರಿಗೆ ದೊರಕುವಂತೆ ಕ್ರಮಕೈಗೊಳ್ಳಬೇಕು.
  3. ರಬ್ಬರು ಕೃಷಿಗೂ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಿಕೊಡಬೇಕು.
  4. ರಾಜ್ಯದಲ್ಲಿ ರಬ್ಬರು ಬೆಲೆ ಸ್ಥಿರೀಕರಣ ನಿಧಿ ಸ್ಥಾಪನೆ ಆಗಬೇಕು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

19 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago