ಪಿಂಚಣಿದಾರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ

December 2, 2022
7:54 AM

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.

ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.

ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror