ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿವೇಶನದಲ್ಲಿ ಹೇಳಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 4 ಲಕ್ಷ ಕೋಟಿ ರೂಪಾಯಿ, ಪಿಎಂ ಫಸಲ್ ಬಿಮಾ ಯೋಜನೆಯಡಿ 2 ಲಕ್ಷ 12 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ರಸಗೊಬ್ಬರ ಸಬ್ಸಿಡಿಗೆ 14 ಲಕ್ಷದ 6 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರ ದರ ಏರಿಕೆ ಇದ್ದಾಗ್ಯೂ, ಅತ್ಯಂತ ಕಡಿಮೆ ಬೆಲೆಗೆ ರೈತರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಕ್ರಮಗಳಿಂದಾಗಿ ಇಳುವರಿ ಗಣನೀಯ ಏರಿಕೆಯಾಗಿದ್ದು, ಕೃಷಿ ಮಾರುಕಟ್ಟೆ ವಿಸ್ತರಣೆಯಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿ, ಸಕಾಲದಲ್ಲಿ ನಷ್ಟ ಪರಿಹಾರ ಮುಂತಾದ ಕ್ರಮಗಳಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಆದಾಯ ಹೆಚ್ಚಳವಾಗಿದೆ ಎಂದು ವಿವರಿಸಿದರು.
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…