ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿವೇಶನದಲ್ಲಿ ಹೇಳಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 4 ಲಕ್ಷ ಕೋಟಿ ರೂಪಾಯಿ, ಪಿಎಂ ಫಸಲ್ ಬಿಮಾ ಯೋಜನೆಯಡಿ 2 ಲಕ್ಷ 12 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ರಸಗೊಬ್ಬರ ಸಬ್ಸಿಡಿಗೆ 14 ಲಕ್ಷದ 6 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರ ದರ ಏರಿಕೆ ಇದ್ದಾಗ್ಯೂ, ಅತ್ಯಂತ ಕಡಿಮೆ ಬೆಲೆಗೆ ರೈತರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಕ್ರಮಗಳಿಂದಾಗಿ ಇಳುವರಿ ಗಣನೀಯ ಏರಿಕೆಯಾಗಿದ್ದು, ಕೃಷಿ ಮಾರುಕಟ್ಟೆ ವಿಸ್ತರಣೆಯಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿ, ಸಕಾಲದಲ್ಲಿ ನಷ್ಟ ಪರಿಹಾರ ಮುಂತಾದ ಕ್ರಮಗಳಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಆದಾಯ ಹೆಚ್ಚಳವಾಗಿದೆ ಎಂದು ವಿವರಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…