ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿವೇಶನದಲ್ಲಿ ಹೇಳಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 4 ಲಕ್ಷ ಕೋಟಿ ರೂಪಾಯಿ, ಪಿಎಂ ಫಸಲ್ ಬಿಮಾ ಯೋಜನೆಯಡಿ 2 ಲಕ್ಷ 12 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ರಸಗೊಬ್ಬರ ಸಬ್ಸಿಡಿಗೆ 14 ಲಕ್ಷದ 6 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರ ದರ ಏರಿಕೆ ಇದ್ದಾಗ್ಯೂ, ಅತ್ಯಂತ ಕಡಿಮೆ ಬೆಲೆಗೆ ರೈತರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಕ್ರಮಗಳಿಂದಾಗಿ ಇಳುವರಿ ಗಣನೀಯ ಏರಿಕೆಯಾಗಿದ್ದು, ಕೃಷಿ ಮಾರುಕಟ್ಟೆ ವಿಸ್ತರಣೆಯಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿ, ಸಕಾಲದಲ್ಲಿ ನಷ್ಟ ಪರಿಹಾರ ಮುಂತಾದ ಕ್ರಮಗಳಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಆದಾಯ ಹೆಚ್ಚಳವಾಗಿದೆ ಎಂದು ವಿವರಿಸಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…