ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿವೇಶನದಲ್ಲಿ ಹೇಳಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 4 ಲಕ್ಷ ಕೋಟಿ ರೂಪಾಯಿ, ಪಿಎಂ ಫಸಲ್ ಬಿಮಾ ಯೋಜನೆಯಡಿ 2 ಲಕ್ಷ 12 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ರಸಗೊಬ್ಬರ ಸಬ್ಸಿಡಿಗೆ 14 ಲಕ್ಷದ 6 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರ ದರ ಏರಿಕೆ ಇದ್ದಾಗ್ಯೂ, ಅತ್ಯಂತ ಕಡಿಮೆ ಬೆಲೆಗೆ ರೈತರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಕ್ರಮಗಳಿಂದಾಗಿ ಇಳುವರಿ ಗಣನೀಯ ಏರಿಕೆಯಾಗಿದ್ದು, ಕೃಷಿ ಮಾರುಕಟ್ಟೆ ವಿಸ್ತರಣೆಯಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿ, ಸಕಾಲದಲ್ಲಿ ನಷ್ಟ ಪರಿಹಾರ ಮುಂತಾದ ಕ್ರಮಗಳಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಆದಾಯ ಹೆಚ್ಚಳವಾಗಿದೆ ಎಂದು ವಿವರಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…