Advertisement
ಪ್ರಮುಖ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

Share

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ನಡೆದಿದೆ.  ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳಾಗಿರುವ ಸಾಧ್ಯತೆ ಇದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ಅಪಘಾತದ ಕಾರಣದ ಬಗ್ಗೆ ಇನ್ನೂ ಯಾವುದೇ ಅಧಿಕೃತ ವರದಿಗಳು ಬಿಡುಗಡೆಯಾಗಿಲ್ಲ.ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು   ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿತ್ತು. ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅದು ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವಾಗಿತ್ತು. ವಿಮಾನದಲ್ಲಿ 168 ಭಾರತೀಯರು,  53 ಮಂದಿ ಬ್ರಿಟಿಷ್‌ ನಾಗರೀಕರು, ಒಬ್ಬರು ಕೆನಡಿಯನ್‌, ಏಳು ಮಂದಿ ಪೋರ್ಚಿಗೀಸ್‌ ಪ್ರಜೆಗಳು ಇದ್ದರು ಎಂದು ಏರ್‌ ಇಂಡಿಯಾ ಖಚಿತಪಡಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

8 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

8 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

19 hours ago