Advertisement
The Rural Mirror ಕಾಳಜಿ

ಪ್ರಜಾಪ್ರಭುತ್ವದಲ್ಲಿ ನೋಟಾ (NOTA)‌ | ಸುಶ್ರುತ ದೇಲಂಪಾಡಿ ಹೀಗೆ ಬರೆಯುತ್ತಾರೆ…

Share

ಈಗ ಚುನಾವಣೆಯ ಹವಾ. ಎಲ್ಲಾ ಪಕ್ಷಗಳೂ ಓಲೈಕೆಯಲ್ಲಿ ತೊಡಗಿವೆ. ಈ ನಡುವೆ ಯುವ ಪೀಳಿಗೆಯ ಚಿಂತನೆಯ ಬಗ್ಗೆ ಯಾವ ಪಕ್ಷಗಳು, ಸಮಾಜವೂ ಗಮನಿಸುತ್ತಿಲ್ಲ. ಆದರೆ ಯುವ ಪೀಳಿಗೆಯಲ್ಲಿ ಹೊಸ ಚಿಂತನೆಗಳು ಆರಂಭವಾಗಿವೆ. ಸೋಶಿಯಲ್‌ ಮೀಡಿಯಾವನ್ನು ಹೆಚ್ಚು ಬಳಕೆ ಮಾಡುವ ಯುವ ಪೀಳಿಗೆಯು ಸುಳ್ಳುಗಳನ್ನು ಕ್ಷಣದಲ್ಲಿ ಪತ್ತೆ ಮಾಡುತ್ತದೆ, ಹಾಗೂ ಹೇಳದೆ ಒಳಗೊಳಗೆ ನಗುತ್ತಾರೆ..!. ಇಂತಹದ್ದರ ನಡುವೆ ನೋಟಾ ಕೂಡಾ ಈಗ ಗಮನ ಸೆಳೆಯುತ್ತಿದೆ. ಈ ಬಗ್ಗೆ ಸುಳ್ಯ ತಾಲೂಕಿನ ಮರ್ಕಂಜದ ಸುಶ್ರುತ ದೇಲಂಪಾಡಿ ಅವರು ಕಳೆದ ವರ್ಷವೇ ನೋಟಾ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದರು. ಅವರ ಬರಹ ಹೀಗಿದೆ……….ಮುಂದೆ ಓದಿ…..

ಪ್ರಜಾಪ್ರಭುತ್ವ ಸಮಾಜದಲ್ಲಿ ಪ್ರಜೆಗಳಿಗೆ ಶಕ್ತಿ ಇರಬೇಕು. ರಾಜಕೀಯದವರ ಬಳಿ ಅಲ್ಲ. ಹಿಂದಿನ ಪೋಸ್ಟ್ಗಳಲ್ಲೇ ಹೇಳಿದಂತೆ, ರಾಜಕೀಯದವರನ್ನು ಯಾರೇನೂ ಮಾಡಲಾಗದ ಕಾಲದಲ್ಲಿ ನಾವಿದ್ದೇವೆ. ಎಲ್ಲರೂ ಒಟ್ಟು ಸೇರಿ(ದರೆ), ಒಂದು ಇಲೆಕ್ಷನಲ್ಲಿ ಒಬ್ಬರನ್ನು ಸೋಲಿಸಬಹುದು. ಅದೇ ಮ್ಯಾಕ್ಸಿಮಮ್ ನಾವು ಮಾಡಲಿಕ್ಕಾಗುವುದು. ಅದೇ ಅವರು ಬಯಸಿದರೆ ನಮ್ಮನ್ನು ಏನೇನು ಮಾಡಬಹುದು?! ಅಷ್ಟು ಶಕ್ತಿ ಅವರಿಗೆ ಯಾಕೆ? ಎಲ್ಲಾ ಕ್ಷೇತ್ರಗಳಂತೆ ಒಂದು ಕ್ಷೇತ್ರವಾದ ರಾಜಕೀಯದಲ್ಲಿ ಮಾತ್ರ ಅಷ್ಟು ಶಕ್ತಿ ಕ್ರೋಢೀಕರಣವಾಗಲು ಕಾರಣವೇನು? ಅದಕ್ಕೆ ಪ್ರಜೆಗಳೇನು ಮಾಡಬಹುದು?

ಇಡೀ ಜಾಗತಿಕವಾಗಿಯೇ ಡಿಕನ್ಸ್‌ಟ್ರಕ್ಷನ್ ನಂತರದ ಕಾಲದಲ್ಲಿ ಹೊಸದಾಗಿ ಬೆಳೆಯುತ್ತಿರುವ ಒಂದು ಜ್ಞಾನಶಾಖೆ ವಿಕೇಂದ್ರೀಕರಣ/ಡಿಸೆಂಟ್ರಲೈಜೇಷನ್. ಅದರ ಮೂಲೋದ್ದೇಶವೇ ಶಕ್ತಿ ಹಂಚಿಕೆಯಾಗಬೇಕು, ಒಂದೆಡೆ ಕ್ರೋಢೀಕೃತವಾಗಿರಬಾರದು ಎಂದು. ಅಂತೆಯೇ, ರಾಜಕೀಯದ ಮೋನೊಪಲಿ ಮುರಿದು ಶಕ್ತಿಯ ಹಂಚಿಕೆಯಾಗಬೇಕಾದುದು ಇಂದಿನ ತುರ್ತು. ಇನ್ನೂ ವಿವರಿಸಿ ಹೇಳುವುದಾದರೆ, ನೋಟಾ ಎಂಬ ಕಾನ್ಸೆಪ್ಟೇ ಚಳುವಳಿಯ ರೂಪದ್ದು. ಭಾರತದಲ್ಲಿ ನೋಟಾ ಶುರುವಾಗಿದ್ದು 2013ರಲ್ಲಿ. ಹತ್ತು ವರ್ಷ ಕಳೆಯಿತಷ್ಟೆ. ನಮ್ಮ ಮರ್ಕಂಜದಂತಹ ಸರಿಯಾಗಿ ನೆಟ್ವರ್ಕ್ ಸಿಗದ ಹಳ್ಳಿಗೂ ನೋಟಾ ಗಾಳಿ ಹರಡಿದೆ ಎಂದರೆ ನೋಟಾ ಒಂದು ಶಕ್ತಿಯಾಗಿ ಬೆಳೆಯುತ್ತಿದೆ ಎಂದಾಯ್ತು. ಈ ನೋಟಾ ಓಟುಗಳ ಸಂಖ್ಯೆ ಹೆಚ್ಚಾದಂತೆ ರಾಜಕೀಯ ವ್ಯವಸ್ಥೆಗೇ ಬಿಸಿಮುಟ್ಟಬಹುದೆಂದೊಂದೂಹೆ. ಈಗಾಗಲೇ ಕಳೆದ ವರ್ಷ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯ ಬ್ಯಾಟಿಂಗಿಗೆ ಧುರೀಣರು ಬೆವರಿದ್ದಾರೆಂಬುದು ಗೊತ್ತಾಗಿದೆ. ಇನ್ನು ನೋಟಾ ಗಾಳಿ ನಿಜವಾಗಲೂ ಎಲ್ಲೆಡೆ ಬೀಸಲು ಶುರುವಾದರೆ..!?

ನೋಟಾವು ಮತಪಟ್ಟಿಯಲ್ಲಿ ಇನ್ನೊಂದು ಅಭ್ಯರ್ಥಿಯೇ ಆಗಿದ್ದರೂ ನೋಟಾ ಒತ್ತಿ ಮತ ಹಾಳುಮಾಡಬೇಡಿ ಎನ್ನುವವರು ಬಹಳ ಮಂದಿ. ನೋಟಾಗೆ ಬಿದ್ದ ಓಟುಗಳು ಕೌಂಟ್ ಅಗುತ್ತದೆಯೇ ವಿನಃ ಸದ್ಯದ ಸ್ಥಿತಿಯಲ್ಲಿ ಪರಿಗಣನೆಗೆ ಬರುವುದಿಲ್ಲ. ಇನ್ಫ್ಯಾಕ್ಟ್, ಅದನ್ನು ‘ಹಾಳುಮತ’ವೆಂದು ಕನ್ಸಿಡರ್ ಮಾಡಲಾಗುತ್ತದೆ. ಆದರೂ, ನೋಟಾ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಬೇಕು. ಗೆಲ್ಲುವುದಕ್ಕಲ್ಲ. ನೋಟಾ ನೇರವಾಗಿ ಗೆಲ್ಲುವುದಿಲ್ಲ. ಆದರೆ ನೋಟಾ ಮತಗಳು ಜನರು ಹೊಲಸು ರಾಜಕೀಯದಿಂದ ಬೇಸತ್ತುದನ್ನು ಧ್ವನಿಸುತ್ತಿರುತ್ತದೆ. ರಾಜಕೀಯದವರಿಗೆ ಹೀಗೇ ಇದ್ದರೆ ಆಗುವುದಿಲ್ಲ ಎಂಬ ಸಂದೇಶ ರವಾನೆಯಾಗುತ್ತಿರುತ್ತದೆ. ರಾಜಕೀಯ ವ್ಯವಸ್ಥೆಯಲ್ಲೇ ಜನ ಬದಲಾವಣೆ ಬಯಸುತ್ತಿದ್ದಾರೆಂದು ನೋಟಾ ದಾಖಲು ಮಾಡಿಕೊಳ್ಳುತ್ತದೆ.

ಮತದಾನವಿರುವುದು ಅಭ್ಯರ್ಥಿಯನ್ನು ಗೆಲ್ಲಿಸಲಿಕ್ಕೆ/ಸೋಲಿಸಲಿಕ್ಕೆ ಎನ್ನುವುದು ಬಹಳ ಸಂಕುಚಿತಗೊಂಡ ವಿಶ್ಲೇಷಣೆ. ಆ ಸಂಕುಚಿತ ದೃಷ್ಟಿಗೆ ನೋಟಾ ನಿರರ್ಥಕ ಎಂದೇ ಕಾಣುತ್ತದೆ. ಮತ್ತು ಆ ವಿಶ್ಲೇಷಣೆಯನ್ನೇ ರಾಜಕೀಯ ಪಕ್ಷಗಳು ಮುಂದಿಡುತ್ತವೆ. ಯಾಕೆಂದರೆ ಅವರಿಗೆ ಗೆಲ್ಲಬೇಕಿದೆ. ಹಾಗೆಂದು ಜನರಿಗೆ ಗೆಲ್ಲಿಸುವ ಜವಾಬ್ದಾರಿಯೂ ಇಲ್ಲ, ಸೋಲಿಸುವ ಜವಾಬ್ದಾರಿಯೂ ಇಲ್ಲ. ಜನರಿಗೆ ಅವರ ಅಭಿಪ್ರಾಯವನ್ನು ದಾಖಲಿಸಬೇಕಾದ ಜವಾಬ್ದಾರಿ ಇದೆ ಅಷ್ಟೆ. ಎರಡರ ಮಧ್ಯದ ವ್ಯತ್ಯಾಸ ತುಂಬ ಸೂಕ್ಷ್ಮವಾದದ್ದು. ಮತದಾನವು ನಮ್ಮ ಈ ಹೊತ್ತಿನ ನಿಲುವನ್ನು ದಾಖಲಿಸುವ ಜಾಗ ಎಂದು ಅರ್ಥೈಸಿಕೊಂಡಾಗ, ನೋಟಾ ಸದ್ಯದ ವ್ಯವಸ್ಥೆಯಲ್ಲಿ ಒಂದು ಆಶಾಕಿರಣವಾಗಿ ಕಾಣಿಸುತ್ತದೆ.

ನೋಟಾ ಎನ್ನುವುದು ಮೇಲ್ನೋಟಕ್ಕೆ ತುಂಬ ಸಿಂಪಲ್ ಆಗಿ None of the above ಎಂಬ ನಾಲ್ಕನೇ ಆಪ್ಷನ್ನಿನಂತೆ ಕಂಡರೂ, ತಾರ್ಕಿಕವಾಗಿ ಅರ್ಥ ಮಾಡಿಕೊಳ್ಳಲು ಬಹಳ ಕಷ್ಟ. ನೋಟಾ ಗೆಲ್ಲುವುದಿಲ್ಲ ಎಂದು ಗೊತ್ತಿದ್ದೂ ಅದಕ್ಕೆ ಮತ ಚಲಾಯಿಸುವ ಕಾನ್ಸೆಪ್ಟೆಲ್ಲ ತಲೆತಲಾಂತರದವರ ತಲೆ ಮೇಲೇ ಹೋಗುವಂತದ್ದು. ಗೆಲ್ಲುವುದಕ್ಕಾಗಿ/ಗೆಲ್ಲಿಸುವುದಕ್ಕಾಗಿ ಓಟು ಹಾಕುವುದೇ ಅಲ್ಲ ಎಂದೆಲ್ಲ ಹೇಳಿಬಿಟ್ಟರೆ ಅಷ್ಟೆ ಮತ್ತೆ…ಧೂಮಕೇತು ಹೋದ ಹಾಗೆ, ಸೀದಾ ಸುಂಯ್ಕ!

ನೋಟಾ ಒತ್ತಿ ಮತ ಹಾಳುಮಾಡಿಕೊಂಡವರಿಗೆ ಸರಕಾರದ ನಡೆಗಳನ್ನ ಪ್ರಶ್ನಿಸುವ ನೈತಿಕ ಹಕ್ಕಿರುವುದಿಲ್ಲ ಎಂದೆಲ್ಲ ನೈತಿಕವಾಗಿಯೇ ಹೊಯ್ಕೊಳ್ಳುವವರು ಇಷ್ಟು ಸಮಯ ನೈತಿಕ, ಅನೈತಿಕ, ತರತರಾತಿಕದಿಂದ ಪ್ರಶ್ನಿಸಿದ ವ್ಯವಸ್ಥೆಗಳೆಲ್ಲ ಎಷ್ಟು ಸುಧಾರಿಸಿದೆ ಬೇಕಲ್ಲ! ಯಾವೊಬ್ಬನೂ ನೈತಿಕವಾಗಿಯೂ ಮೂಸಿ ನೋಡುವುದಿಲ್ಲ ನಮ್ಮ ಪ್ರಶ್ನೆಗಳನ್ನು, ಖಂಡನೆಗಳನ್ನೆಲ್ಲ. ‘ನಾನು ಸರಕಾರದ ಆ ನಿರ್ಧಾರವನ್ನು ಖಂಡಿಸುತ್ತೇನೆ’ ಎಂದು ಹಾ ಹಾ ಮಾಡುವುದೆಲ್ಲ ಪಕ್ಕದ ಗಲ್ಲಿಯವರೊಡನೆ ಜಗಳವಾಡಲು ಆದೀತಷ್ಟೆ. ಸರಕಾರ ‘ಖಂಡಿಸಿಕೊಂಡು ಕೂತುಕೋ’ ಎಂದು ಅದರ ಪಾಡಿಗೆ ಬೇಕಾದ್ದು ಬೇಕಾದ ಹಾಗೆ ಮಾಡಿಕೊಂಡಿರ್ತದೆ. ತಲೆತಲಾಂತರದಿಂದ ಹೊತ್ತು ಮೆರೆಸಿದ್ದಲ್ವಾ! ಯಾವ ನೈತಿಕ ರಾಜಕಾರಣಿ ಎಷ್ಟು ಬಾರಿ ಈ ನೈತಿಕ ಧ್ವನಿಯನ್ನೆಲ್ಲ ಆಲಿಸಿ ನೈತಿಕ ಕ್ರಮ ತೆಗೆದುಕೊಂಡಿದ್ದಾರೆ?! ಸುಮ್ಮನೇ ಬೊಬ್ಬೆ. ಅದರ ಮೇಲಿಂದ ಇವರೆಲ್ಲರ ಎಲ್ಲಾ ಪ್ರಶ್ನೆಗಳೂ ಎಡಬಲ ಪ್ರೇರಿತವಾದದ್ದು. ಎಂಥದ್ದನ್ನೂ ಸಮರ್ಥಿಸಲಿಕ್ಕೆ ಮತ್ತು ಎಂಥದ್ದನ್ನೂ ಹೀಯಾಳಿಸಲಿಕ್ಕೆ ಇವರಿಗೆ ನೈತಿಕ ಹಕ್ಕು ಬೇಕಾಗುದು. ನೈತಿಕ ಕರ್ಮ ನಮ್ಮದು! ಹೇಳಿ ಪ್ರಯೋಜನ ಇಲ್ಲ‌.

ಒಂದೊಳ್ಳೆಯ ಸಮಾಜಕ್ಕೆ, ರಾಜಕಾರಣಿಗಳಿಗೆ ಮಾತ್ರ ದೂರದೃಷ್ಟಿ ಇರಬೇಕಾದ್ದಲ್ಲ. ಮತದಾರರಿಗೂ ಇರಬೇಕು. ನೋಟಾ ಎಂಬುದು ಅಂತಹುದೇ ಒಂದು ದೂರದ ಬೆಟ್ಟ. ದೃಷ್ಟಿ ನೆಟ್ಟು ನಡೆಯಬೇಕು. ಕಣ್ಣಿಗೆ ನುಣ್ಣಗೆ ಕಂಡರೂ ಏರಬೇಕಾದರೆ ಮನಸ್ಸು ಅಷ್ಟೇ ಸಿದ್ಧವಾಗಿರಬೇಕು. ಅದೊಂದು ಒಗ್ಗಟ್ಟಾದ ಪ್ರತಿರೋಧದ ಧ್ವನಿ. ಚಿಲ್ರೆ ಪಿಲ್ರೆ ಅಭ್ಯರ್ಥಿಗಳಿಗಲ್ಲ, ಹರಕು ಪರಕು ಪಕ್ಷಗಳಿಗಲ್ಲ, ಸೀದಾ ವ್ಯವಸ್ಥೆಗೇ. ನೋಟಾದಿಂದ ಇಮಿಡಿಯೇಟ್ ಡೋಪಮೈನ್ ಸಿಗುವುದಿಲ್ಲ, ನಿಜ. ಆದರೂ, ಅದನ್ನೊತ್ತಬೇಕಾದ ಅನಿವಾರ್ಯತೆ ಈಗಿನದ್ದು. ನೋಟಾ ಹೆಚ್ಚಾದಂತೆ ನಿಜವಾದ ಪ್ರಜಾಪ್ರಭುತ್ವ ಕಾರ್ಯರೂಪಕ್ಕೆ ಬಂದೀತು. ಯಾಕೆಂದರೆ, ನೋಟಾವು ಜನರಿಂದ ಜನರಿಗಾಗಿ ಜನರಿಗೋಸ್ಕರ ಜನರೇ ನಡೆಸುವ ಮತ್ತು ನಡೆಸಬೇಕಾದ ಒಂದು ಚಳುವಳಿ.

ಬರಹ :
ಸುಶ್ರುತ ದೇಲಂಪಾಡಿ
ಸುಶ್ರುತ ದೇಲಂಪಾಡಿ

ಸುಶ್ರುತ ದೇಲಂಪಾಡಿ ಅವರು ಸುಳ್ಯ ತಾಲೂಕಿನ ಮರ್ಕಂಜದವರು. ಕ್ರಿಯಾಶೀಲ ಯುವಕ. ಇಂಜಿನಿಯರಿಂಗ್‌ ಪದವೀಧರನಾಗಿ ಬಿವಿಎ ಮಾಡಿದ್ದಾರೆ. ಸದ್ಯ ಸ್ವತಂತ್ರವಾಗಿ ಕಲಾ ವಿಷಯದಲ್ಲಿ ಕೆಲಸ ಮಾಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

9 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

9 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

9 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

9 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago