ಜನವರಿ ತಿಂಗಳ ಅಂತ್ಯದೊಳಗೆ, ಮಕರ ಸಂಕ್ರಮಣ ಕಳೆದ ಬಳಿಕ ವಾರದೊಳಗೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ನಡೆಯಲಿದೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ಸದಸ್ಯ, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಮಕರ ಸಂಕ್ರಾಂತಿ ಕಳೆದು ಒಂದು ವಾರದೊಳಗೆ ಅಂದರೆ ಜನವರಿ ತಿಂಗಳ ಅಂತ್ಯದೊಳಗೆ ಶ್ರೀರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಬಗ್ಗೆ ಉದ್ಘಾಟನೆ ದಿನ ಶೀಘ್ರದಲ್ಲೇ ನಿಗದಿಯಾಗಲಿದೆ ಎಂದು ಅವರು ತಿಳಿಸಿದರು.
ಅಯೋಧ್ಯೆ ಶ್ರೀರಾಮ ಮಂದಿರ ದಲ್ಲಿ ಇತರ ದೇವಸ್ಥಾನಗಳಂತೆ ಸೇವೆಯ ಪಟ್ಟಿ ಇರುವುದಿಲ್ಲ . ಸಾಮಾನ್ಯವಾಗಿ ಭಕ್ತರು ದೇವಸ್ಥಾನಗಳಿಗೆ ಹೋದಾಗ ಅಲ್ಲಿನ ಸೇವೆಯ ಪಟ್ಟಿಯನ್ನು ನೋಡಿ ದೇವಸ್ಥಾನದಲ್ಲಿ ಸೇವೆ ನೀಡುತ್ತಾರೆ. ಆದರೆ ಈ ರೀತಿಯ ವ್ಯವಸ್ಥೆ ಅಯೋಧ್ಯೆ ಶ್ರೀ ರಾಮ ಮಂದಿರ ದಲ್ಲಿ ಇರುವುದಿಲ್ಲ. ದೇವರಿಗೆ ಕಾಣಿಕೆ ಸಮರ್ಪಿಸುವವರು ರಾಮ ರಾಜ್ಯದ ಕನಸು ನನಸು ಗೊಳಿಸಲು ನೀಡುವ ಕಾಣಿಕೆ ಆಗಿದೆ. ಬದುಕಿನಲ್ಲಿ ಒಬ್ಬನಿಗೆ ಹತ್ತು ಲಕ್ಷ ರೂ ಖರ್ಚು ಮಾಡುವ ಸಾಮರ್ಥ್ಯ ಇದ್ದರೆ, ವಾಸಕ್ಕೆ ಮನೆ ಇಲ್ಲದವನಿಗೆ ಮನೆ ನಿರ್ಮಾಣ ಮಾಡಿ ಕೊಡುವುದು, ಆರೋಗ್ಯ ಶಿಕ್ಷಣದಂತಹ ಕೊಡುಗೆಗಳನ್ನು ಆತನ ಸಂಪತ್ತಿಗೆ ತಕ್ಕಂತೆ ನೀಡಿ ರಾಮ ರಾಜ್ಯದ ಕನಸು ನನಸು ಮಾಡಿದರೆ ಅದುವೆ ನೀಡುವ ಸೇವೆ ಆಗಿದೆ ಎಂದು ತಿಳಿಸಿದರು.
ಶ್ರೀ ರಾಮ ಮಂದಿರದಲ್ಲಿ ಯಾವುದೇ ಸೇವೆಯು ಭಕ್ತರಿಗೆ ಇರದೆ ಇದ್ದರೂ ಭಕ್ತರೂ ತಮ್ಮ ಇಷ್ಟಾನುಸಾರ ಕಾಣಿಕೆಗಳನ್ನು ಕಾಣಿಕೆ ಡಬ್ಬಿಗೆ ಹಾಕಬಹುದು ಎಂದರು. ಶ್ರೀ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ನನಗೂ ಸಂಬಂಧ ಇಲ್ಲ. ರಾಮ ಸೇವೆ ಮಾಡುವುದೆ ದೇಶ ಸೇವೆ. ಯಾರೂ ಏನೂ ಬೇಕಾದರೂ ಮಾಡಲಿ ಎಂದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…